Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...