Homeಮುಖಪುಟಡಿಸೆಂಬರ್ 25 ವಾಜಪೇಯಿ ಜನ್ಮದಿನ: 'ಆಯ್ದ' ರೈತರೊಂದಿಗೆ ಪ್ರಧಾನಿ ಮೋದಿ ಸಂವಹನ!

ಡಿಸೆಂಬರ್ 25 ವಾಜಪೇಯಿ ಜನ್ಮದಿನ: ‘ಆಯ್ದ’ ರೈತರೊಂದಿಗೆ ಪ್ರಧಾನಿ ಮೋದಿ ಸಂವಹನ!

ಈ ಮಾತುಕತೆಯ ಸಂದರ್ಭದಲ್ಲಿ ಕೃಷಿ ಕಾನೂನುಗಳ ಕುರಿತು ಕೇಂದ್ರ ಸರಕಾರವು ತನ್ನ ದೃಢ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿದೆ

- Advertisement -
- Advertisement -

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 25 ರಂದು ಪ್ರಧನಿ ನರೇಂದ್ರ ಮೋದಿ ಆರು ರಾಜ್ಯಗಳ ಆಯ್ದ ರೈತರುಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಮಾತುಕತೆ ಕುತೂಹಲ ಮೂಡಿಸಿದೆ.

ಈ ಮಾತುಕತೆಯ ಸಂದರ್ಭದಲ್ಲಿ ಕೃಷಿ ಕಾನೂನುಗಳ ಕುರಿತು ಕೇಂದ್ರ ಸರಕಾರವು ತನ್ನ ದೃಢ ನಿಲುವನ್ನು ಸ್ಪಷ್ಟಪಡಿಸಲಿದ್ದು, ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್’ ಯೋಜನೆಯಡಿ 9 ಕೋಟಿ ರೈತರುಗಳ ಬ್ಯಾಂಕ್ ಖಾತೆಗಳಿಗೆ ಒಟ್ಟು 18,000 ಕೋಟಿ ರೂ. ಜಮಾ ಮಾಡಲಾಗುವುದು ಎಂದು ಪ್ರಧಾನ ಮಂತ್ರಿಯ ಕಛೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಹಾರಾಷ್ಟ್ರ: EWS ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಘೋಷಣೆ

6 ರಾಜ್ಯಗಳ ಆಯ್ದ ರೈತರೊಂದಿಗೆ ಪ್ರಧಾನಿ ಸಮಾಲೋಚನೆ ನಡೆಸಲಿದ್ದು, ರೈತರ ಕಲ್ಯಾಣಕ್ಕಾಗಿ ಸರಕಾರ ತೆಗೆದುಕೊಂಡಿರುವ ಉಪಕ್ರಮಗಳ ಕುರಿತು ಪ್ರಧಾನಿ ತಿಳಿಸಲಿದ್ದಾರೆ. ಜೊತೆಗೆ ಇಲ್ಲಿ ರೈತರು ತಮ್ಮ ಅನುಭವವನ್ನು ಹಂಚಿಕೊಳ್ಳಬಹುದು.

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 28 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದಾರೆ.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಕರ್ನಾಟಕದಲ್ಲಿಯೂ ಕೂಡ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ರೈತರ ಕರೆಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಸಾವಿರಾರು ಜನರು ಒಪ್ಪತ್ತಿನ ಊಟ ಬಿಡುವ ಮೂಲಕ ಅನ್ನದಾತರಿಗೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನುಡಿ ನಮನ: ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...