Homeಮುಖಪುಟಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

- Advertisement -
- Advertisement -

ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು, ಇದು ಇತರ ಮೂಲಭೂತ ಹಕ್ಕುಗಳಷ್ಟೇ ಮುಖ್ಯವಾಗಿದೆ ಎಂದು ಮುಂಬೈ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೂರ್ವ ಉಪನಗರಗಳಿಗೆ ಹೆಚ್ಚುವರಿ ಸ್ಮಶಾನ ಸ್ಥಳಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಬಾಂಬೆ ಹೈಕೋರ್ಟ್, ಈ ಮಹತ್ವದ ಅಂಶಗಳನ್ನು ಗಮನಿಸಿದೆ.

ಜನರು ಸಮಾಧಿ ಮಾಡಲು ಮಂಗಳ ಗ್ರಹಕ್ಕೆ ಹೋಗಬೇಕೇ?, ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ(BMC) ಸ್ಮಶಾನಕ್ಕಾಗಿ ಕಳೆದ ನವೆಂಬರ್‌ನಿಂದ ಸ್ಥಳವನ್ನು ಕುಂಡು ಹಿಡಿಯಲಾಗಲಿಲ್ಲ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಈ ವೇಳೆ ಕಳೆದ ಎರಡು ವರ್ಷಗಳಿಂದ ಪೂರ್ವ ಉಪನಗರಗಳಿಗೆ ಹೆಚ್ಚುವರಿ ರುದ್ರಭೂಮಿಯನ್ನು ಒದಗಿಸದ ಮುಂಬೈ ಮಹಾನಗರ ಪಾಲಿಕೆಯ ಉಡಾಫೆ ಧೋರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾ. ಅಮಿತ್ ಬೋರ್ಕರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ತರಾಟೆಗೆ ತೆಗೆದುಕೊಂಡಿದೆ.

ಮಹಾನಗರ ಪಾಲಿಕೆಗೆ ಮೃತ ವ್ಯಕ್ತಿಗಳನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಲು ಸಾಕಷ್ಟು ಜಾಗ ಒದಗಿಸಬೇಕಾದುದು ಶಾಸನಾತ್ಮಕ ಕರ್ತವ್ಯ ಹಾಗೂ ಅನಿವಾರ್ಯತೆ ಇದೆ. ಈ ಬಾಧ್ಯತೆಯ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಹೇಳಿದೆ.

ಮುಂಬೈನ ಪೂರ್ವ ಉಪನಗರಗಳಿಗೆ ಹೆಚ್ಚುವರಿ ಸ್ಮಶಾನ ಭೂಮಿಯನ್ನು ಕೋರಿ ಉಪನಗರದ ಗೋವಂಡಿ-ಶಂಶೇರ್ ಅಹ್ಮದ್, ಅಬ್ರಾರ್ ಚೌಧರಿ ಮತ್ತು ಅಬ್ದುಲ್ ರೆಹಮಾನ್ ಶಾ ಎಂಬ ಮೂವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಮೃತ ವ್ಯಕ್ತಿಯ ಯೋಗ್ಯ ಮತ್ತು ಗೌರವಾನ್ವಿತ ಅಂತ್ಯಕ್ರಿಯೆಯ ಹಕ್ಕು ಇತರ ಮೂಲಭೂತ ಹಕ್ಕುಗಳಷ್ಟೇ ಮುಖ್ಯವಾಗಿದೆ ಎಂದು ಕೋರ್ಟ್‌ ಹೇಳಿದೆ.

ಸ್ಮಶಾನಕ್ಕಾಗಿ ಮೂರು ಸ್ಥಳಗಳನ್ನು ಉಲ್ಲೇಖಿಸಿ ಅರ್ಜಿಯಲ್ಲಿ ಹೇಳಲಾಗಿದೆ. ಆದರೆ ಆ ಸ್ಥಳಗಳು ಸ್ಮಶಾನಕ್ಕೆ ಯೋಗ್ಯವಾಗಿಲ್ಲ ಎಂದು ಬಿಎಂಸಿ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಆಗ ಜನರು ಸಮಾಧಿ ಮಾಡಲು ಮಂಗಳ ಗ್ರಹಕ್ಕೆ ಹೋಗಬೇಕೇ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ಅವರು ಮಂಗಳ ಗ್ರಹಕ್ಕೆ ಹೋಗಬೇಕೇ? ನವೆಂಬರ್‌ನಿಂದ ನಿಮಗೆ ಸ್ಥಳ ಸಿಗಲಿಲ್ಲ. ಸತ್ತವರು ಈಗ ಎಲ್ಲಿಗೆ ಹೋಗುತ್ತಾರೆ? ಸಿಜೆ ಉಪಾಧ್ಯಾಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಜಾರ್ಖಂಡ್: ವಿಧಾನಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲ್ಪನಾ ಸೊರೇನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...