Homeಮುಖಪುಟಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

- Advertisement -
- Advertisement -

ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು, ಇದು ಇತರ ಮೂಲಭೂತ ಹಕ್ಕುಗಳಷ್ಟೇ ಮುಖ್ಯವಾಗಿದೆ ಎಂದು ಮುಂಬೈ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೂರ್ವ ಉಪನಗರಗಳಿಗೆ ಹೆಚ್ಚುವರಿ ಸ್ಮಶಾನ ಸ್ಥಳಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಬಾಂಬೆ ಹೈಕೋರ್ಟ್, ಈ ಮಹತ್ವದ ಅಂಶಗಳನ್ನು ಗಮನಿಸಿದೆ.

ಜನರು ಸಮಾಧಿ ಮಾಡಲು ಮಂಗಳ ಗ್ರಹಕ್ಕೆ ಹೋಗಬೇಕೇ?, ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ(BMC) ಸ್ಮಶಾನಕ್ಕಾಗಿ ಕಳೆದ ನವೆಂಬರ್‌ನಿಂದ ಸ್ಥಳವನ್ನು ಕುಂಡು ಹಿಡಿಯಲಾಗಲಿಲ್ಲ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಈ ವೇಳೆ ಕಳೆದ ಎರಡು ವರ್ಷಗಳಿಂದ ಪೂರ್ವ ಉಪನಗರಗಳಿಗೆ ಹೆಚ್ಚುವರಿ ರುದ್ರಭೂಮಿಯನ್ನು ಒದಗಿಸದ ಮುಂಬೈ ಮಹಾನಗರ ಪಾಲಿಕೆಯ ಉಡಾಫೆ ಧೋರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾ. ಅಮಿತ್ ಬೋರ್ಕರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ತರಾಟೆಗೆ ತೆಗೆದುಕೊಂಡಿದೆ.

ಮಹಾನಗರ ಪಾಲಿಕೆಗೆ ಮೃತ ವ್ಯಕ್ತಿಗಳನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಲು ಸಾಕಷ್ಟು ಜಾಗ ಒದಗಿಸಬೇಕಾದುದು ಶಾಸನಾತ್ಮಕ ಕರ್ತವ್ಯ ಹಾಗೂ ಅನಿವಾರ್ಯತೆ ಇದೆ. ಈ ಬಾಧ್ಯತೆಯ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಹೇಳಿದೆ.

ಮುಂಬೈನ ಪೂರ್ವ ಉಪನಗರಗಳಿಗೆ ಹೆಚ್ಚುವರಿ ಸ್ಮಶಾನ ಭೂಮಿಯನ್ನು ಕೋರಿ ಉಪನಗರದ ಗೋವಂಡಿ-ಶಂಶೇರ್ ಅಹ್ಮದ್, ಅಬ್ರಾರ್ ಚೌಧರಿ ಮತ್ತು ಅಬ್ದುಲ್ ರೆಹಮಾನ್ ಶಾ ಎಂಬ ಮೂವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಮೃತ ವ್ಯಕ್ತಿಯ ಯೋಗ್ಯ ಮತ್ತು ಗೌರವಾನ್ವಿತ ಅಂತ್ಯಕ್ರಿಯೆಯ ಹಕ್ಕು ಇತರ ಮೂಲಭೂತ ಹಕ್ಕುಗಳಷ್ಟೇ ಮುಖ್ಯವಾಗಿದೆ ಎಂದು ಕೋರ್ಟ್‌ ಹೇಳಿದೆ.

ಸ್ಮಶಾನಕ್ಕಾಗಿ ಮೂರು ಸ್ಥಳಗಳನ್ನು ಉಲ್ಲೇಖಿಸಿ ಅರ್ಜಿಯಲ್ಲಿ ಹೇಳಲಾಗಿದೆ. ಆದರೆ ಆ ಸ್ಥಳಗಳು ಸ್ಮಶಾನಕ್ಕೆ ಯೋಗ್ಯವಾಗಿಲ್ಲ ಎಂದು ಬಿಎಂಸಿ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಆಗ ಜನರು ಸಮಾಧಿ ಮಾಡಲು ಮಂಗಳ ಗ್ರಹಕ್ಕೆ ಹೋಗಬೇಕೇ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ಅವರು ಮಂಗಳ ಗ್ರಹಕ್ಕೆ ಹೋಗಬೇಕೇ? ನವೆಂಬರ್‌ನಿಂದ ನಿಮಗೆ ಸ್ಥಳ ಸಿಗಲಿಲ್ಲ. ಸತ್ತವರು ಈಗ ಎಲ್ಲಿಗೆ ಹೋಗುತ್ತಾರೆ? ಸಿಜೆ ಉಪಾಧ್ಯಾಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಜಾರ್ಖಂಡ್: ವಿಧಾನಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲ್ಪನಾ ಸೊರೇನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...