ಗುರುವಾರ ಕೇರಳ ವಿಧಾನಸಭೆಯಲ್ಲಿ ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದರು. ಕಳೆದ 36 ದಿನಗಳಿಂದ ದೇಶದ ರಾಜಧಾನಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಈ ಕಾಯ್ದೆಗಳ ರದ್ಧತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರ ಸಮಸ್ಯೆಗಳನ್ನು ಚರ್ಚಿಸಲು ಮತ್ತು ರೈತರನ್ನು ಬೆಂಬಲಿಸಲು, ಹೋರಾಟಕ್ಕೆ ಸಹಮತ ವ್ಯಕ್ತಪಡಿಸಲು ಕರೆದ ಒಂದು ತಾಸಿನ ವಿಶೇಷ ಅಧಿವೇಶನದಲ್ಲಿ ನಿರ್ಣಯ ಮಂಡಿಸಿ ಅವರು ಮಾತನಾಡಿದರು. ಮೂರು ಕಾಯ್ದೆಗಳನ್ನು ಹಿಂಪಡೆಯಬೇಕೆಂದು ನಿರ್ಣಯ ಮಂಡಿಸಿ ಮಾತನಾಡಿದ ಪಿಣರಾಯಿ, ದೇಶವು ಈ ಅಪ್ರತಿಮ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸಂಸತ್ತಿನಲ್ಲಿ ಅಂಗೀಕಾರವಾದ ಕಾಯ್ದೆಗಳು ಕೇವಲ ರೈತ ವಿರೋಧಿಯಷ್ಟೇ ಅಲ್ಲ, ಅವು ಕಾರ್ಪೋರೇಟ್ ಪರವಾಗಿವೆ. ಈಗಾಗಲೇ ಪ್ರತಿಭಟನಾ ನಿರತ 32 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಕೇರಳ: ಪುರಸಭೆ ಕಚೇರಿಯಲ್ಲಿ ’ಜೈಶ್ರೀರಾಮ್’ ಬ್ಯಾನರ್ ವಿರುದ್ದ ರಾಷ್ಟ್ರಧ್ವಜ ಹಾರಿಸಿದ ಡಿವೈಎಫ್ಐ!
Kerala Chief Minister Pinarayi Vijayan moves resolution against Centre's farm laws in the special Session of State Assembly. https://t.co/0PbHgLCIRi pic.twitter.com/LgytHPXib6
— ANI (@ANI) December 31, 2020
ತಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ನಿರ್ದಿಷ್ಟ ಕಾನೂನುಗಳ ಬಗ್ಗೆ ಜನರಿಗೆ ಆತಂಕಗಳಿದ್ದಾಗ, ಶಾಸನಸಭೆಗಳು ಈ ಕುರಿತು ಗಂಭಿರ ದೃಷ್ಟಿಕೋನ ಹೊಂದಬೇಕಾದ ನೈತಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದ ಅವರು, “ಕೃಷಿ ಈ ದೇಶದ ಸಂಸ್ಕೃತಿಯ ಭಾಗವಾಗಿತ್ತು. ರೈತರು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರವು ಈ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರ ಪರಿಣಾಮ ಈಗ ಸಿಗುತ್ತಿರುವ ಬೆಂಬಲ ಬೆಲೆಯನ್ನೂ ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ” ಎಂದು ವಿಜಯನ್ ಹೇಳಿದರು.
ಇದನ್ನೂ ಓದಿ: ಕೇಂದ್ರದ ಕೃಷಿ ಕಾನೂನಿನ ವಿರುದ್ದ ವಿಶೇಷ ಅಧಿವೇಶನ ಕರೆಯಲಿರುವ ಕೇರಳ!