Homeಮುಖಪುಟಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

- Advertisement -
- Advertisement -

ಭಾರತದ ಪ್ರತಿಷ್ಟಿತ ಫಿಲ್ಮ್‌ ಸೊಸೈಟಿಗಳಲ್ಲಿ ಒಂದಾದ ಇದೇ ವರ್ಷ ಸುವರ್ಣ ಮಹೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಸುಚಿತ್ರ ಫಿಲ್ಮ್‌ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು ಬೆಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸುಚಿತ್ರ ಸಿನಿಮಾ ಮತ್ತು ಕಲ್ಚರಲ್‌ ಅಕಾಡೆಮಿ, ಫಿಲ್ಮ್‌ ಸೊಸೈಟಿ ಎದುರು ಸೇರಿದ ಚಿತ್ರಕರ್ಮಿಗಳು, ಸೋನೆ ಮಳೆಯ ನಡುವೆಯೇ ಪ್ರತಿಭಟನೆ ನಡೆಸಿದರು. ಸುಚಿತ್ರ ಫಿಲ್ಮ್‌‌ ಸೊಸೈಟಿಯನ್ನು ಹೊರದೂಡಲು ಸುಚಿತ್ರ ಟ್ರಸ್ಟ್‌ ಯತ್ನಿಸುತ್ತಿರುವುದನ್ನು ಖಂಡಿಸಿದರು.

ಫಿಲ್ಮ್‌ ಸೊಸೈಟಿಯ ಅಧ್ಯಕ್ಷರು ಟ್ರಸ್ಟ್ ಶಾಶ್ವತ ಸದಸ್ಯರಾಗಿಯೇ ಮುಂದುವರಿಯಬೇಕು. ಸುಚಿತ್ರ ಪ್ರಾಂಗಣದಲ್ಲಿ ನಡೆಸಲಾಗುವ ಚಟುವಟಿಕೆಗಳಲ್ಲಿ ಫಿಲ್ಮ್‌‌ ಸೊಸೈಟಿಗೆ ಪ್ರಾತಿನಿಧ್ಯ ಇರಬೇಕು. ಸುಚಿತ್ರ ಫಿಲ್ಮ್‌ ಸೊಸೈಟಿಯ ಕಾರ್ಯಕಾರಿ ಸದಸ್ಯರುಗಳೊಂದಿಗೆ ಸೇರಿ ಸಭೆ ನಡೆಸಿ ಬಾಡಿಗೆ ದರ ವಿಧಿಸುವುದರ ಬಗ್ಗೆ ಚರ್ಚೆ ನಡೆಸಬೇಕು. ಟ್ರಸ್ಟ್‌‌ ಹುಟ್ಟಿಗೆ ಕಾರಣವಾದ ಸುಚಿತ್ರ ಫಿಲ್ಮ್‌‌ ಸೊಸೈಟಿಯು ಯಾವುದೇ ಅಡೆ ತಡೆ ಇಲ್ಲದೇ ಸುಚಿತ್ರ ಪ್ರಾಂಗಣದಲ್ಲಿ ಚಟುವಟಿಕೆಗಳನ್ನು ನಡೆಸುವಂತಾಗಬೇಕು ಎಂದು ಆಗ್ರಹಿಸಲಾಯಿತು.

ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಸುರೇಶ್ ಹೆಬ್ಳಿಕರ್‌, ಡಾ.ವಿಜಯಮ್ಮ, ವಿವೇಕ್‌ ಶ್ಯಾನ್‌ಭಾಗ್‌, ಸಿರಿಮನೆ ನಾಗರಾಜ್‌, ರವೀಂದ್ರನಾಥ್‌ ಗುರು, ಕೃಷ್ಣಮೂರ್ತಿ ಸಿ.ಆರ್‌., ದೀಪಾ ಗಣೇಶ್‌, ಬಿ.ಎಸ್‌.ಮನೋಹರ್‌, ಗಣೇಶ್‌ ಶೆಣೈ, ಮುರಳಿ ಪಿ.ಬಿ., ರಮೇಶ್‌ ಶಿವಮೊಗ್ಗ, ಸಿ.ಎಸ್.ಕೃಷ್ಣಪ್ರಸಾದ್‌, ಸುರೇಂದ್ರ, ವಿಮಲಾ, ವೀರಸಂಗಯ್ಯ ಸೇರಿದಂತೆ 70ಕ್ಕೂ ಹೆಚ್ಚು ಮಂದಿ ಹಾಜರಿದ್ದು, ಹೋರಾಟವನ್ನು ಬೆಂಬಲಿಸಿದರು. ಪ್ರತಿಭಟನೆಯನ್ನು ತಡೆಯಲು ಪೊಲೀಸರು ಯತ್ನಿಸಿರುವ ಘಟನೆಯೂ ನಡೆಯಿತು.

ಇದನ್ನೂ ಓದಿರಿ: ಬಹುಜನ ಭಾರತ; ಅವಸಾನಗೊಂಡ ಆತ್ಮಸಾಕ್ಷಿಗಳು ಮತ್ತು ’ಜೈಭೀಮ್’ ಸಿನೆಮಾ

ಬೆಳಿಗ್ಗೆ 10.20ಕ್ಕೆ ಮೌನಪ್ರತಿಭಟನೆ ಆರಂಭವಾಯಿತು. 11.40 ಮಳೆ ಬರಲು ಶುರುವಾಯಿತು. ಆ ಸಂದರ್ಭದಲ್ಲಿ ಮಾತನಾಡಿದ ಫಿಲ್ಮ್‌ ಸೊಸೈಟಿಯ ಅಧ್ಯಕ್ಷರಾದ ಬಿ.ಸುರೇಶ್ ಅವರು, ಸುಚಿತ್ರ ಟ್ರಸ್ಟ್‌ ಮಾಡಿರುವ ಅನ್ಯಾಯವನ್ನು ಪ್ರಸ್ತಾಪಿಸಿದರು. ಟ್ರಸ್ಟ್‌ನ ಯಾವುದೇ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಲಿಲ್ಲ. ಕಾನೂನು ಸಮರ ನಡೆಸುವುದಾಗಿ ಬಿ.ಸುರೇಶ್ ತಿಳಿಸಿದರು.

ಬೆಂಗಳೂರಿನ ಚಾಮರಾಜಪೇಟೆಯ ಚಿಕ್ಕಕೋಣೆಯಲ್ಲಿ ಸುಚಿತ್ರ ಫಿಲ್ಮ್‌ ಸೊಸೈಟಿಯು 1971ರಲ್ಲಿ ಕೆಲವು ಸಿನೆಮಾ ಆಸಕ್ತರು ಸೇರಿ ಆರಂಭಿಸಿದರು. ಸಿನೆಮಾ ಪ್ರದರ್ಶನಕ್ಕಾಗಿ ವಿವಿಧ ಚಿತ್ರಮಂದಿರಗಳನ್ನು ಹುಡುಕಾಡಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದಾಗ ಕರ್ನಾಟಕ ಸರ್ಕಾರವು ಬನಶಂಕರಿಯಲ್ಲಿ ಸುಚಿತ್ರ ಫಿಲ್ಮ್‌ ಸೊಸೈಟಿಯ ಚಟುವಟಿಕೆಗಳನ್ನು ನಡೆಸುವುದಕ್ಕಾಗಿಯೇ ಒಂದು ಸ್ವಂತ ಚಿತ್ರಮಂದಿರವನ್ನು ಕಟ್ಟಿಕೊಳ್ಳಲು ಒಂದು ಸಿಎ ನಿವೇಶನವನ್ನು ಬಿಡಿಎ ಮುಖಾಂತರ ಗುತ್ತಿಗೆ ಆಧಾರದಲ್ಲಿ ಕೊಡಿಸಿತು. ನಿವೇಶನವನ್ನು ನೋಡಿಕೊಳ್ಳಲು ಒಂದು ಟ್ರಸ್ಟ್‌ ಮಾಡಿಕೊಳ್ಳಬೇಕೆಂದು ಸರ್ಕಾರ ಸೂಚಿಸಿತು. ಅದಕ್ಕನುಸಾರವಾಗಿ ಸುಚಿತ್ರ ಫಿಲ್ಮ್‌‌ ಸೊಸೈಟಿಯು 1979ರಲ್ಲಿ ಸುಚಿತ್ರ ಸಿನೆಮಾ ಅಕಾಡೆಮಿ ಎಂಬ ಟ್ರಸ್ಟ್ ಒಂದನ್ನು ಸ್ಥಾಪಿಸಿತು.

ಅಕಾಡೆಮಿಯ ಪ್ರಾರಂಭದ ಟ್ರಸ್ಟಿಗಳು ಬಹುತೇಕ ಸುಚಿತ್ರ ಫಿಲ್ಮ್‌‌ ಸೊಸೈಟಿಯಿಂದ ಬಂದವರೇ ಆಗಿದ್ದರಿಂದ ಎರಡೂ ಸಂಸ್ಥೆಗಳು ಅಂದಿನಿಂದಲೂ ಪರಸ್ಪರ ಸೌಹಾರ್ದಯುತವಾಗಿ ನಡೆದುಕೊಳ್ಳುತ್ತಾ ಬಂದಿದ್ದವು. ಸುಚಿತ್ರ ಟ್ರಸ್ಟ್‌ ಹಾಗೂ ಸೊಸೈಟಿ ಕಾಲಕಾಲಕ್ಕೆ ಬದಲಾವಣೆಗಳನ್ನೂ ಕಂಡಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸುಚಿತ್ರ ಟ್ರಸ್ಟ್‌, ಸೊಸೈಟಿಯನ್ನು ಹೊರಗೆ ಇಡುವ ಪ್ರಯತ್ನಗಳನ್ನು ಮಾಡುತ್ತಿರುವುದು ವಿವಾದಗಳಿಗೆ ಕಾರಣವಾಗಿದೆ. ಟ್ರಸ್ಟ್‌ ಹುಟ್ಟಿಗೆ ಕಾರಣವಾದ ಸೊಸೈಟಿಯನ್ನೇ ಹೊರದಬ್ಬಲು ಯತ್ನಿಸಲಾಗುತ್ತಿದೆ ಎಂದು ಸೊಸೈಟಿಯ ಸದಸ್ಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಸುರೇಶ್‌, “2015ರವರೆಗೆ ಸುಚಿತ್ರ ಟ್ರಸ್ಟ್‌‌ನ ಆಡಳಿತಾತ್ಮಕ ವೆಚ್ಚವನ್ನು ಸುಚಿತ್ರ ಫಿಲ್ಮ್‌‌ ಸೊಸೈಟಿಯೇ ಭಾಗಶಃ ಭರಿಸುತ್ತಿದ್ದುದರಿಂದ ಅಕಾಡೆಮಿಯು ಫಿಲ್ಮ್‌ ಸೊಸೈಟಿಗೆ ಚಿತ್ರಪ್ರದರ್ಶನಕ್ಕೆ ಸಭಾಂಗಣದ ಬಾಡಿಗೆ ಕೇಳುತ್ತಿರಲಿಲ್ಲ. ಸುಚಿತ್ರ ಅಕಾಡೆಮಿಯು 2015ರಲ್ಲಿ ಪುರವಂಕರ ಸಂಸ್ಥೆಯೊಡನೆ ಒಪ್ಪಂದ ಮಾಡಿಕೊಂಡು, ಆ ಸಂಸ್ಥೆಯಿಂದ ಸಿಎಸ್‌ಆರ್‌ ನಿಧಿ ಮೂಲಕ ದೇಣಿಗೆಯನ್ನು ಪಡೆದು ಕಟ್ಟಡವನ್ನು ನವೀಕರಣ ಮಾಡಿತು. ಆಗ ಸುಚಿತ್ರ ಸಿನೆಮಾ ಮತ್ತು ಕಲ್ಚರಲ್‌‌ ಅಕಾಡೆಮಿ ಎಂದಿದ್ದ ಟ್ರಸ್ಟ್ ಹೆಸರನ್ನು ಪುರವಂಕರ ಸುಚಿತ್ರ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಎಂದು ಬದಲಾಯಿಸಲಾಯಿತು. ಆವರೆಗೆ ಟ್ರಸ್ಟ್‌‌ನ ಖಾಯಂ ಸದಸ್ಯತ್ವ ಇದ್ದ ಸುಚಿತ್ರ ಫಿಲ್ಮ್‌‌ ಸೊಸೈಟಿಯ ಅಧ್ಯಕ್ಷರನ್ನು ಆಹ್ವಾನಿತರು ಎಂದು ಬದಲಿಸಲಾಯಿತು. ಅಲ್ಲದೇ ಸೋಸೈಟಿಯ ಅಧ್ಯಕ್ಷರನ್ನು ಯಾವುದೇ ಸೂಚನೆ ಇಲ್ಲದೆ ಟ್ರಸ್ಟ್‌ನಿಂದ ಹೊರಹಾಕಲಾಯಿತು” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಬಿ.ಸುರೇಶ್‌‌ ಮಾತನಾಡಿದರು.

“ನಂತರದ ಬೆಳವಣಿಗೆಯಲ್ಲಿ ಸುಚಿತ್ರ ಟ್ರಸ್ಟ್ ಸಭಾಂಗಣಗಳ ಬಾಡಿಗೆ ದರ ಹೆಚ್ಚಳ ಮಾಡಿದೆ, ಸುಚಿತ್ರ ಫಿಲ್ಮ್‌‌ ಸೊಸೈಟಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಹಿಂಪಡೆದಿದೆ, ಇದರಿಂದಾಗಿ ಸಭಾಂಗಣದ ಬಾಡಿಗೆಯು ಮೂರು ಪಟ್ಟು ಹೆಚ್ಚಾಗುತ್ತದೆ. ಸುಚಿತ್ರ ಫಿಲ್ಮ್‌ ಸೊಸೈಟಿಯ ಕಚೇರಿ ನಡೆಸಲು ಪ್ರತಿ ತಿಂಗಳು 50,000 ರೂ.ಗಳನ್ನು ದೇಣಿಗೆಯಾಗಿ ನೀಡಬೇಕೆಂದು ತಿಳಿಸಲಾಗಿದೆ. ಸದಸ್ಯತ್ವದ ಹಣದಲ್ಲಿಯೇ ನಡೆಯಬೇಕಾದ ಫಿಲ್ಮ್‌‌ ಸೊಸೈಟಿಗೆ ಈ ದುಬಾರೀ ದರ ಆಘಾತ ತಂದಿದೆ.  ಕಳೆದ 9 ತಿಂಗಳಿನಿಂದ ಫಿಲ್ಮ್‌ ಸೊಸೈಟಿಗೆ ಸುಚಿತ್ರ ಪ್ರಾಂಗಣದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲಾಗದಂತಾಗಿದೆ” ಎಂದು ಹೇಳಿದರು.

“2021ರ ಮಾರ್ಚ್ 24ರವರೆಗೆ ಹಳೆಯ ದರದಲ್ಲಿ ಬಾಡಿಗೆಯನ್ನು ಕೊಟ್ಟಿದ್ದರೂ, ಪರಿಷ್ಕೃತ ದರದಂತೆ ಬಾಡಿಗೆಯನ್ನು ನೀಡಲು ಮತ್ತು ಸುಚಿತ್ರ ಕಚೇರಿಯ ಬಳಕೆಗಾಗಿ ತಿಂಗಳಿಗೆ 50,000 ರೂ. ನಂತೆ ಜನವರಿ 21ರಿಂದ, ಒಟ್ಟು 7 ಲಕ್ಷ ರೂಪಾಯಿಗಳನ್ನು ಕೊಡಲು ಪತ್ರ ಮುಖೇನ ಒತ್ತಾಯಿಸಲಾಗುತ್ತಿದೆ. (ಇದರಲ್ಲಿ ಫಿಲ್ಮ್‌ ಸೊಸೈಟಿಯು ಈ ಹಿಂದೆ ಕೋವಿಡ್ ಸಂಕಷ್ಟದ ಕಾಲದಲ್ಲಿ ನೀಡಿದ 2 ಲಕ್ಷ ರೂ.ಗಳ ಮುಂಗಡ ಹಣವನ್ನು ಸಹ ಮುರಿದುಕೊಳ್ಳಲಾಗಿದೆ.) ಜೊತೆಗೆ ಎರಡು ಲಾಯರ್ ನೋಟೀಸ್ ಸಹ ಸುಚಿತ್ರ ಫಿಲ್ಮ್‌ ಸೊಸೈಟಿಗೆ ಸುಚಿತ್ರ ಟ್ರಸ್ಟ್ ಕಳುಹಿಸಿದೆ” ಎಂದು ಮಾಹಿತಿ ನೀಡಿದರು.

“ಸುಚಿತ್ರ ಫಿಲ್ಮ್‌ ಸೊಸೈಟಿಯನ್ನು ಟ್ರಸ್ಟ್‌ ಜಾಗದಲ್ಲಿ ನಡೆಸುತ್ತಿದ್ದೀರಿ. ತಿಂಗಳಿಗೆ 50,000 ರೂಪಾಯಿ ಕೊಡಬೇಕು ಎಂದು ಲಾಯರ್‌ ನೋಟೀಸ್ ಕಳುಹಿಸಲಾಗಿದೆ. ವರ್ಷಕ್ಕೆ 6,00,000 ರೂಪಾಯಿ ಬಾಡಿಗೆಯನ್ನು ಕಟ್ಟಬೇಕಾಗುತ್ತದೆ. ಸುಚಿತ್ರ ಫಿಲ್ಮ್‌ ಸೊಸೈಟಿಗೆ ವರ್ಷಕ್ಕೆ ಬರುವ ಆದಾಯವೇ ನಾಲ್ಕು ಲಕ್ಷ ಅಥವಾ ನಾಲ್ಕೂವರೆ ಲಕ್ಷ ರೂ. ದಾಟುವುದಿಲ್ಲ. ಬರುವ ಹಣವನ್ನೆಲ್ಲ ಬಾಡಿಗೆ ಕಟ್ಟಿದರೆ ಕಾರ್ಯಕ್ರಮಗಳನ್ನು ಮಾಡುವುದು ಹೇಗೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...