Homeಮುಖಪುಟಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

- Advertisement -
- Advertisement -

ಭಾರತದ ಪ್ರತಿಷ್ಟಿತ ಫಿಲ್ಮ್‌ ಸೊಸೈಟಿಗಳಲ್ಲಿ ಒಂದಾದ ಇದೇ ವರ್ಷ ಸುವರ್ಣ ಮಹೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಸುಚಿತ್ರ ಫಿಲ್ಮ್‌ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು ಬೆಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸುಚಿತ್ರ ಸಿನಿಮಾ ಮತ್ತು ಕಲ್ಚರಲ್‌ ಅಕಾಡೆಮಿ, ಫಿಲ್ಮ್‌ ಸೊಸೈಟಿ ಎದುರು ಸೇರಿದ ಚಿತ್ರಕರ್ಮಿಗಳು, ಸೋನೆ ಮಳೆಯ ನಡುವೆಯೇ ಪ್ರತಿಭಟನೆ ನಡೆಸಿದರು. ಸುಚಿತ್ರ ಫಿಲ್ಮ್‌‌ ಸೊಸೈಟಿಯನ್ನು ಹೊರದೂಡಲು ಸುಚಿತ್ರ ಟ್ರಸ್ಟ್‌ ಯತ್ನಿಸುತ್ತಿರುವುದನ್ನು ಖಂಡಿಸಿದರು.

ಫಿಲ್ಮ್‌ ಸೊಸೈಟಿಯ ಅಧ್ಯಕ್ಷರು ಟ್ರಸ್ಟ್ ಶಾಶ್ವತ ಸದಸ್ಯರಾಗಿಯೇ ಮುಂದುವರಿಯಬೇಕು. ಸುಚಿತ್ರ ಪ್ರಾಂಗಣದಲ್ಲಿ ನಡೆಸಲಾಗುವ ಚಟುವಟಿಕೆಗಳಲ್ಲಿ ಫಿಲ್ಮ್‌‌ ಸೊಸೈಟಿಗೆ ಪ್ರಾತಿನಿಧ್ಯ ಇರಬೇಕು. ಸುಚಿತ್ರ ಫಿಲ್ಮ್‌ ಸೊಸೈಟಿಯ ಕಾರ್ಯಕಾರಿ ಸದಸ್ಯರುಗಳೊಂದಿಗೆ ಸೇರಿ ಸಭೆ ನಡೆಸಿ ಬಾಡಿಗೆ ದರ ವಿಧಿಸುವುದರ ಬಗ್ಗೆ ಚರ್ಚೆ ನಡೆಸಬೇಕು. ಟ್ರಸ್ಟ್‌‌ ಹುಟ್ಟಿಗೆ ಕಾರಣವಾದ ಸುಚಿತ್ರ ಫಿಲ್ಮ್‌‌ ಸೊಸೈಟಿಯು ಯಾವುದೇ ಅಡೆ ತಡೆ ಇಲ್ಲದೇ ಸುಚಿತ್ರ ಪ್ರಾಂಗಣದಲ್ಲಿ ಚಟುವಟಿಕೆಗಳನ್ನು ನಡೆಸುವಂತಾಗಬೇಕು ಎಂದು ಆಗ್ರಹಿಸಲಾಯಿತು.

ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಸುರೇಶ್ ಹೆಬ್ಳಿಕರ್‌, ಡಾ.ವಿಜಯಮ್ಮ, ವಿವೇಕ್‌ ಶ್ಯಾನ್‌ಭಾಗ್‌, ಸಿರಿಮನೆ ನಾಗರಾಜ್‌, ರವೀಂದ್ರನಾಥ್‌ ಗುರು, ಕೃಷ್ಣಮೂರ್ತಿ ಸಿ.ಆರ್‌., ದೀಪಾ ಗಣೇಶ್‌, ಬಿ.ಎಸ್‌.ಮನೋಹರ್‌, ಗಣೇಶ್‌ ಶೆಣೈ, ಮುರಳಿ ಪಿ.ಬಿ., ರಮೇಶ್‌ ಶಿವಮೊಗ್ಗ, ಸಿ.ಎಸ್.ಕೃಷ್ಣಪ್ರಸಾದ್‌, ಸುರೇಂದ್ರ, ವಿಮಲಾ, ವೀರಸಂಗಯ್ಯ ಸೇರಿದಂತೆ 70ಕ್ಕೂ ಹೆಚ್ಚು ಮಂದಿ ಹಾಜರಿದ್ದು, ಹೋರಾಟವನ್ನು ಬೆಂಬಲಿಸಿದರು. ಪ್ರತಿಭಟನೆಯನ್ನು ತಡೆಯಲು ಪೊಲೀಸರು ಯತ್ನಿಸಿರುವ ಘಟನೆಯೂ ನಡೆಯಿತು.

ಇದನ್ನೂ ಓದಿರಿ: ಬಹುಜನ ಭಾರತ; ಅವಸಾನಗೊಂಡ ಆತ್ಮಸಾಕ್ಷಿಗಳು ಮತ್ತು ’ಜೈಭೀಮ್’ ಸಿನೆಮಾ

ಬೆಳಿಗ್ಗೆ 10.20ಕ್ಕೆ ಮೌನಪ್ರತಿಭಟನೆ ಆರಂಭವಾಯಿತು. 11.40 ಮಳೆ ಬರಲು ಶುರುವಾಯಿತು. ಆ ಸಂದರ್ಭದಲ್ಲಿ ಮಾತನಾಡಿದ ಫಿಲ್ಮ್‌ ಸೊಸೈಟಿಯ ಅಧ್ಯಕ್ಷರಾದ ಬಿ.ಸುರೇಶ್ ಅವರು, ಸುಚಿತ್ರ ಟ್ರಸ್ಟ್‌ ಮಾಡಿರುವ ಅನ್ಯಾಯವನ್ನು ಪ್ರಸ್ತಾಪಿಸಿದರು. ಟ್ರಸ್ಟ್‌ನ ಯಾವುದೇ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಲಿಲ್ಲ. ಕಾನೂನು ಸಮರ ನಡೆಸುವುದಾಗಿ ಬಿ.ಸುರೇಶ್ ತಿಳಿಸಿದರು.

ಬೆಂಗಳೂರಿನ ಚಾಮರಾಜಪೇಟೆಯ ಚಿಕ್ಕಕೋಣೆಯಲ್ಲಿ ಸುಚಿತ್ರ ಫಿಲ್ಮ್‌ ಸೊಸೈಟಿಯು 1971ರಲ್ಲಿ ಕೆಲವು ಸಿನೆಮಾ ಆಸಕ್ತರು ಸೇರಿ ಆರಂಭಿಸಿದರು. ಸಿನೆಮಾ ಪ್ರದರ್ಶನಕ್ಕಾಗಿ ವಿವಿಧ ಚಿತ್ರಮಂದಿರಗಳನ್ನು ಹುಡುಕಾಡಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದಾಗ ಕರ್ನಾಟಕ ಸರ್ಕಾರವು ಬನಶಂಕರಿಯಲ್ಲಿ ಸುಚಿತ್ರ ಫಿಲ್ಮ್‌ ಸೊಸೈಟಿಯ ಚಟುವಟಿಕೆಗಳನ್ನು ನಡೆಸುವುದಕ್ಕಾಗಿಯೇ ಒಂದು ಸ್ವಂತ ಚಿತ್ರಮಂದಿರವನ್ನು ಕಟ್ಟಿಕೊಳ್ಳಲು ಒಂದು ಸಿಎ ನಿವೇಶನವನ್ನು ಬಿಡಿಎ ಮುಖಾಂತರ ಗುತ್ತಿಗೆ ಆಧಾರದಲ್ಲಿ ಕೊಡಿಸಿತು. ನಿವೇಶನವನ್ನು ನೋಡಿಕೊಳ್ಳಲು ಒಂದು ಟ್ರಸ್ಟ್‌ ಮಾಡಿಕೊಳ್ಳಬೇಕೆಂದು ಸರ್ಕಾರ ಸೂಚಿಸಿತು. ಅದಕ್ಕನುಸಾರವಾಗಿ ಸುಚಿತ್ರ ಫಿಲ್ಮ್‌‌ ಸೊಸೈಟಿಯು 1979ರಲ್ಲಿ ಸುಚಿತ್ರ ಸಿನೆಮಾ ಅಕಾಡೆಮಿ ಎಂಬ ಟ್ರಸ್ಟ್ ಒಂದನ್ನು ಸ್ಥಾಪಿಸಿತು.

ಅಕಾಡೆಮಿಯ ಪ್ರಾರಂಭದ ಟ್ರಸ್ಟಿಗಳು ಬಹುತೇಕ ಸುಚಿತ್ರ ಫಿಲ್ಮ್‌‌ ಸೊಸೈಟಿಯಿಂದ ಬಂದವರೇ ಆಗಿದ್ದರಿಂದ ಎರಡೂ ಸಂಸ್ಥೆಗಳು ಅಂದಿನಿಂದಲೂ ಪರಸ್ಪರ ಸೌಹಾರ್ದಯುತವಾಗಿ ನಡೆದುಕೊಳ್ಳುತ್ತಾ ಬಂದಿದ್ದವು. ಸುಚಿತ್ರ ಟ್ರಸ್ಟ್‌ ಹಾಗೂ ಸೊಸೈಟಿ ಕಾಲಕಾಲಕ್ಕೆ ಬದಲಾವಣೆಗಳನ್ನೂ ಕಂಡಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸುಚಿತ್ರ ಟ್ರಸ್ಟ್‌, ಸೊಸೈಟಿಯನ್ನು ಹೊರಗೆ ಇಡುವ ಪ್ರಯತ್ನಗಳನ್ನು ಮಾಡುತ್ತಿರುವುದು ವಿವಾದಗಳಿಗೆ ಕಾರಣವಾಗಿದೆ. ಟ್ರಸ್ಟ್‌ ಹುಟ್ಟಿಗೆ ಕಾರಣವಾದ ಸೊಸೈಟಿಯನ್ನೇ ಹೊರದಬ್ಬಲು ಯತ್ನಿಸಲಾಗುತ್ತಿದೆ ಎಂದು ಸೊಸೈಟಿಯ ಸದಸ್ಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಸುರೇಶ್‌, “2015ರವರೆಗೆ ಸುಚಿತ್ರ ಟ್ರಸ್ಟ್‌‌ನ ಆಡಳಿತಾತ್ಮಕ ವೆಚ್ಚವನ್ನು ಸುಚಿತ್ರ ಫಿಲ್ಮ್‌‌ ಸೊಸೈಟಿಯೇ ಭಾಗಶಃ ಭರಿಸುತ್ತಿದ್ದುದರಿಂದ ಅಕಾಡೆಮಿಯು ಫಿಲ್ಮ್‌ ಸೊಸೈಟಿಗೆ ಚಿತ್ರಪ್ರದರ್ಶನಕ್ಕೆ ಸಭಾಂಗಣದ ಬಾಡಿಗೆ ಕೇಳುತ್ತಿರಲಿಲ್ಲ. ಸುಚಿತ್ರ ಅಕಾಡೆಮಿಯು 2015ರಲ್ಲಿ ಪುರವಂಕರ ಸಂಸ್ಥೆಯೊಡನೆ ಒಪ್ಪಂದ ಮಾಡಿಕೊಂಡು, ಆ ಸಂಸ್ಥೆಯಿಂದ ಸಿಎಸ್‌ಆರ್‌ ನಿಧಿ ಮೂಲಕ ದೇಣಿಗೆಯನ್ನು ಪಡೆದು ಕಟ್ಟಡವನ್ನು ನವೀಕರಣ ಮಾಡಿತು. ಆಗ ಸುಚಿತ್ರ ಸಿನೆಮಾ ಮತ್ತು ಕಲ್ಚರಲ್‌‌ ಅಕಾಡೆಮಿ ಎಂದಿದ್ದ ಟ್ರಸ್ಟ್ ಹೆಸರನ್ನು ಪುರವಂಕರ ಸುಚಿತ್ರ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಎಂದು ಬದಲಾಯಿಸಲಾಯಿತು. ಆವರೆಗೆ ಟ್ರಸ್ಟ್‌‌ನ ಖಾಯಂ ಸದಸ್ಯತ್ವ ಇದ್ದ ಸುಚಿತ್ರ ಫಿಲ್ಮ್‌‌ ಸೊಸೈಟಿಯ ಅಧ್ಯಕ್ಷರನ್ನು ಆಹ್ವಾನಿತರು ಎಂದು ಬದಲಿಸಲಾಯಿತು. ಅಲ್ಲದೇ ಸೋಸೈಟಿಯ ಅಧ್ಯಕ್ಷರನ್ನು ಯಾವುದೇ ಸೂಚನೆ ಇಲ್ಲದೆ ಟ್ರಸ್ಟ್‌ನಿಂದ ಹೊರಹಾಕಲಾಯಿತು” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಬಿ.ಸುರೇಶ್‌‌ ಮಾತನಾಡಿದರು.

“ನಂತರದ ಬೆಳವಣಿಗೆಯಲ್ಲಿ ಸುಚಿತ್ರ ಟ್ರಸ್ಟ್ ಸಭಾಂಗಣಗಳ ಬಾಡಿಗೆ ದರ ಹೆಚ್ಚಳ ಮಾಡಿದೆ, ಸುಚಿತ್ರ ಫಿಲ್ಮ್‌‌ ಸೊಸೈಟಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಹಿಂಪಡೆದಿದೆ, ಇದರಿಂದಾಗಿ ಸಭಾಂಗಣದ ಬಾಡಿಗೆಯು ಮೂರು ಪಟ್ಟು ಹೆಚ್ಚಾಗುತ್ತದೆ. ಸುಚಿತ್ರ ಫಿಲ್ಮ್‌ ಸೊಸೈಟಿಯ ಕಚೇರಿ ನಡೆಸಲು ಪ್ರತಿ ತಿಂಗಳು 50,000 ರೂ.ಗಳನ್ನು ದೇಣಿಗೆಯಾಗಿ ನೀಡಬೇಕೆಂದು ತಿಳಿಸಲಾಗಿದೆ. ಸದಸ್ಯತ್ವದ ಹಣದಲ್ಲಿಯೇ ನಡೆಯಬೇಕಾದ ಫಿಲ್ಮ್‌‌ ಸೊಸೈಟಿಗೆ ಈ ದುಬಾರೀ ದರ ಆಘಾತ ತಂದಿದೆ.  ಕಳೆದ 9 ತಿಂಗಳಿನಿಂದ ಫಿಲ್ಮ್‌ ಸೊಸೈಟಿಗೆ ಸುಚಿತ್ರ ಪ್ರಾಂಗಣದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲಾಗದಂತಾಗಿದೆ” ಎಂದು ಹೇಳಿದರು.

“2021ರ ಮಾರ್ಚ್ 24ರವರೆಗೆ ಹಳೆಯ ದರದಲ್ಲಿ ಬಾಡಿಗೆಯನ್ನು ಕೊಟ್ಟಿದ್ದರೂ, ಪರಿಷ್ಕೃತ ದರದಂತೆ ಬಾಡಿಗೆಯನ್ನು ನೀಡಲು ಮತ್ತು ಸುಚಿತ್ರ ಕಚೇರಿಯ ಬಳಕೆಗಾಗಿ ತಿಂಗಳಿಗೆ 50,000 ರೂ. ನಂತೆ ಜನವರಿ 21ರಿಂದ, ಒಟ್ಟು 7 ಲಕ್ಷ ರೂಪಾಯಿಗಳನ್ನು ಕೊಡಲು ಪತ್ರ ಮುಖೇನ ಒತ್ತಾಯಿಸಲಾಗುತ್ತಿದೆ. (ಇದರಲ್ಲಿ ಫಿಲ್ಮ್‌ ಸೊಸೈಟಿಯು ಈ ಹಿಂದೆ ಕೋವಿಡ್ ಸಂಕಷ್ಟದ ಕಾಲದಲ್ಲಿ ನೀಡಿದ 2 ಲಕ್ಷ ರೂ.ಗಳ ಮುಂಗಡ ಹಣವನ್ನು ಸಹ ಮುರಿದುಕೊಳ್ಳಲಾಗಿದೆ.) ಜೊತೆಗೆ ಎರಡು ಲಾಯರ್ ನೋಟೀಸ್ ಸಹ ಸುಚಿತ್ರ ಫಿಲ್ಮ್‌ ಸೊಸೈಟಿಗೆ ಸುಚಿತ್ರ ಟ್ರಸ್ಟ್ ಕಳುಹಿಸಿದೆ” ಎಂದು ಮಾಹಿತಿ ನೀಡಿದರು.

“ಸುಚಿತ್ರ ಫಿಲ್ಮ್‌ ಸೊಸೈಟಿಯನ್ನು ಟ್ರಸ್ಟ್‌ ಜಾಗದಲ್ಲಿ ನಡೆಸುತ್ತಿದ್ದೀರಿ. ತಿಂಗಳಿಗೆ 50,000 ರೂಪಾಯಿ ಕೊಡಬೇಕು ಎಂದು ಲಾಯರ್‌ ನೋಟೀಸ್ ಕಳುಹಿಸಲಾಗಿದೆ. ವರ್ಷಕ್ಕೆ 6,00,000 ರೂಪಾಯಿ ಬಾಡಿಗೆಯನ್ನು ಕಟ್ಟಬೇಕಾಗುತ್ತದೆ. ಸುಚಿತ್ರ ಫಿಲ್ಮ್‌ ಸೊಸೈಟಿಗೆ ವರ್ಷಕ್ಕೆ ಬರುವ ಆದಾಯವೇ ನಾಲ್ಕು ಲಕ್ಷ ಅಥವಾ ನಾಲ್ಕೂವರೆ ಲಕ್ಷ ರೂ. ದಾಟುವುದಿಲ್ಲ. ಬರುವ ಹಣವನ್ನೆಲ್ಲ ಬಾಡಿಗೆ ಕಟ್ಟಿದರೆ ಕಾರ್ಯಕ್ರಮಗಳನ್ನು ಮಾಡುವುದು ಹೇಗೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...