Homeಮುಖಪುಟಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರ

- Advertisement -
- Advertisement -

ಭಾರತದ ಪ್ರತಿಷ್ಟಿತ ಫಿಲ್ಮ್‌ ಸೊಸೈಟಿಗಳಲ್ಲಿ ಒಂದಾದ ಇದೇ ವರ್ಷ ಸುವರ್ಣ ಮಹೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಸುಚಿತ್ರ ಫಿಲ್ಮ್‌ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು ಬೆಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸುಚಿತ್ರ ಸಿನಿಮಾ ಮತ್ತು ಕಲ್ಚರಲ್‌ ಅಕಾಡೆಮಿ, ಫಿಲ್ಮ್‌ ಸೊಸೈಟಿ ಎದುರು ಸೇರಿದ ಚಿತ್ರಕರ್ಮಿಗಳು, ಸೋನೆ ಮಳೆಯ ನಡುವೆಯೇ ಪ್ರತಿಭಟನೆ ನಡೆಸಿದರು. ಸುಚಿತ್ರ ಫಿಲ್ಮ್‌‌ ಸೊಸೈಟಿಯನ್ನು ಹೊರದೂಡಲು ಸುಚಿತ್ರ ಟ್ರಸ್ಟ್‌ ಯತ್ನಿಸುತ್ತಿರುವುದನ್ನು ಖಂಡಿಸಿದರು.

ಫಿಲ್ಮ್‌ ಸೊಸೈಟಿಯ ಅಧ್ಯಕ್ಷರು ಟ್ರಸ್ಟ್ ಶಾಶ್ವತ ಸದಸ್ಯರಾಗಿಯೇ ಮುಂದುವರಿಯಬೇಕು. ಸುಚಿತ್ರ ಪ್ರಾಂಗಣದಲ್ಲಿ ನಡೆಸಲಾಗುವ ಚಟುವಟಿಕೆಗಳಲ್ಲಿ ಫಿಲ್ಮ್‌‌ ಸೊಸೈಟಿಗೆ ಪ್ರಾತಿನಿಧ್ಯ ಇರಬೇಕು. ಸುಚಿತ್ರ ಫಿಲ್ಮ್‌ ಸೊಸೈಟಿಯ ಕಾರ್ಯಕಾರಿ ಸದಸ್ಯರುಗಳೊಂದಿಗೆ ಸೇರಿ ಸಭೆ ನಡೆಸಿ ಬಾಡಿಗೆ ದರ ವಿಧಿಸುವುದರ ಬಗ್ಗೆ ಚರ್ಚೆ ನಡೆಸಬೇಕು. ಟ್ರಸ್ಟ್‌‌ ಹುಟ್ಟಿಗೆ ಕಾರಣವಾದ ಸುಚಿತ್ರ ಫಿಲ್ಮ್‌‌ ಸೊಸೈಟಿಯು ಯಾವುದೇ ಅಡೆ ತಡೆ ಇಲ್ಲದೇ ಸುಚಿತ್ರ ಪ್ರಾಂಗಣದಲ್ಲಿ ಚಟುವಟಿಕೆಗಳನ್ನು ನಡೆಸುವಂತಾಗಬೇಕು ಎಂದು ಆಗ್ರಹಿಸಲಾಯಿತು.

ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಸುರೇಶ್ ಹೆಬ್ಳಿಕರ್‌, ಡಾ.ವಿಜಯಮ್ಮ, ವಿವೇಕ್‌ ಶ್ಯಾನ್‌ಭಾಗ್‌, ಸಿರಿಮನೆ ನಾಗರಾಜ್‌, ರವೀಂದ್ರನಾಥ್‌ ಗುರು, ಕೃಷ್ಣಮೂರ್ತಿ ಸಿ.ಆರ್‌., ದೀಪಾ ಗಣೇಶ್‌, ಬಿ.ಎಸ್‌.ಮನೋಹರ್‌, ಗಣೇಶ್‌ ಶೆಣೈ, ಮುರಳಿ ಪಿ.ಬಿ., ರಮೇಶ್‌ ಶಿವಮೊಗ್ಗ, ಸಿ.ಎಸ್.ಕೃಷ್ಣಪ್ರಸಾದ್‌, ಸುರೇಂದ್ರ, ವಿಮಲಾ, ವೀರಸಂಗಯ್ಯ ಸೇರಿದಂತೆ 70ಕ್ಕೂ ಹೆಚ್ಚು ಮಂದಿ ಹಾಜರಿದ್ದು, ಹೋರಾಟವನ್ನು ಬೆಂಬಲಿಸಿದರು. ಪ್ರತಿಭಟನೆಯನ್ನು ತಡೆಯಲು ಪೊಲೀಸರು ಯತ್ನಿಸಿರುವ ಘಟನೆಯೂ ನಡೆಯಿತು.

ಇದನ್ನೂ ಓದಿರಿ: ಬಹುಜನ ಭಾರತ; ಅವಸಾನಗೊಂಡ ಆತ್ಮಸಾಕ್ಷಿಗಳು ಮತ್ತು ’ಜೈಭೀಮ್’ ಸಿನೆಮಾ

ಬೆಳಿಗ್ಗೆ 10.20ಕ್ಕೆ ಮೌನಪ್ರತಿಭಟನೆ ಆರಂಭವಾಯಿತು. 11.40 ಮಳೆ ಬರಲು ಶುರುವಾಯಿತು. ಆ ಸಂದರ್ಭದಲ್ಲಿ ಮಾತನಾಡಿದ ಫಿಲ್ಮ್‌ ಸೊಸೈಟಿಯ ಅಧ್ಯಕ್ಷರಾದ ಬಿ.ಸುರೇಶ್ ಅವರು, ಸುಚಿತ್ರ ಟ್ರಸ್ಟ್‌ ಮಾಡಿರುವ ಅನ್ಯಾಯವನ್ನು ಪ್ರಸ್ತಾಪಿಸಿದರು. ಟ್ರಸ್ಟ್‌ನ ಯಾವುದೇ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಲಿಲ್ಲ. ಕಾನೂನು ಸಮರ ನಡೆಸುವುದಾಗಿ ಬಿ.ಸುರೇಶ್ ತಿಳಿಸಿದರು.

ಬೆಂಗಳೂರಿನ ಚಾಮರಾಜಪೇಟೆಯ ಚಿಕ್ಕಕೋಣೆಯಲ್ಲಿ ಸುಚಿತ್ರ ಫಿಲ್ಮ್‌ ಸೊಸೈಟಿಯು 1971ರಲ್ಲಿ ಕೆಲವು ಸಿನೆಮಾ ಆಸಕ್ತರು ಸೇರಿ ಆರಂಭಿಸಿದರು. ಸಿನೆಮಾ ಪ್ರದರ್ಶನಕ್ಕಾಗಿ ವಿವಿಧ ಚಿತ್ರಮಂದಿರಗಳನ್ನು ಹುಡುಕಾಡಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದಾಗ ಕರ್ನಾಟಕ ಸರ್ಕಾರವು ಬನಶಂಕರಿಯಲ್ಲಿ ಸುಚಿತ್ರ ಫಿಲ್ಮ್‌ ಸೊಸೈಟಿಯ ಚಟುವಟಿಕೆಗಳನ್ನು ನಡೆಸುವುದಕ್ಕಾಗಿಯೇ ಒಂದು ಸ್ವಂತ ಚಿತ್ರಮಂದಿರವನ್ನು ಕಟ್ಟಿಕೊಳ್ಳಲು ಒಂದು ಸಿಎ ನಿವೇಶನವನ್ನು ಬಿಡಿಎ ಮುಖಾಂತರ ಗುತ್ತಿಗೆ ಆಧಾರದಲ್ಲಿ ಕೊಡಿಸಿತು. ನಿವೇಶನವನ್ನು ನೋಡಿಕೊಳ್ಳಲು ಒಂದು ಟ್ರಸ್ಟ್‌ ಮಾಡಿಕೊಳ್ಳಬೇಕೆಂದು ಸರ್ಕಾರ ಸೂಚಿಸಿತು. ಅದಕ್ಕನುಸಾರವಾಗಿ ಸುಚಿತ್ರ ಫಿಲ್ಮ್‌‌ ಸೊಸೈಟಿಯು 1979ರಲ್ಲಿ ಸುಚಿತ್ರ ಸಿನೆಮಾ ಅಕಾಡೆಮಿ ಎಂಬ ಟ್ರಸ್ಟ್ ಒಂದನ್ನು ಸ್ಥಾಪಿಸಿತು.

ಅಕಾಡೆಮಿಯ ಪ್ರಾರಂಭದ ಟ್ರಸ್ಟಿಗಳು ಬಹುತೇಕ ಸುಚಿತ್ರ ಫಿಲ್ಮ್‌‌ ಸೊಸೈಟಿಯಿಂದ ಬಂದವರೇ ಆಗಿದ್ದರಿಂದ ಎರಡೂ ಸಂಸ್ಥೆಗಳು ಅಂದಿನಿಂದಲೂ ಪರಸ್ಪರ ಸೌಹಾರ್ದಯುತವಾಗಿ ನಡೆದುಕೊಳ್ಳುತ್ತಾ ಬಂದಿದ್ದವು. ಸುಚಿತ್ರ ಟ್ರಸ್ಟ್‌ ಹಾಗೂ ಸೊಸೈಟಿ ಕಾಲಕಾಲಕ್ಕೆ ಬದಲಾವಣೆಗಳನ್ನೂ ಕಂಡಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸುಚಿತ್ರ ಟ್ರಸ್ಟ್‌, ಸೊಸೈಟಿಯನ್ನು ಹೊರಗೆ ಇಡುವ ಪ್ರಯತ್ನಗಳನ್ನು ಮಾಡುತ್ತಿರುವುದು ವಿವಾದಗಳಿಗೆ ಕಾರಣವಾಗಿದೆ. ಟ್ರಸ್ಟ್‌ ಹುಟ್ಟಿಗೆ ಕಾರಣವಾದ ಸೊಸೈಟಿಯನ್ನೇ ಹೊರದಬ್ಬಲು ಯತ್ನಿಸಲಾಗುತ್ತಿದೆ ಎಂದು ಸೊಸೈಟಿಯ ಸದಸ್ಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಸುರೇಶ್‌, “2015ರವರೆಗೆ ಸುಚಿತ್ರ ಟ್ರಸ್ಟ್‌‌ನ ಆಡಳಿತಾತ್ಮಕ ವೆಚ್ಚವನ್ನು ಸುಚಿತ್ರ ಫಿಲ್ಮ್‌‌ ಸೊಸೈಟಿಯೇ ಭಾಗಶಃ ಭರಿಸುತ್ತಿದ್ದುದರಿಂದ ಅಕಾಡೆಮಿಯು ಫಿಲ್ಮ್‌ ಸೊಸೈಟಿಗೆ ಚಿತ್ರಪ್ರದರ್ಶನಕ್ಕೆ ಸಭಾಂಗಣದ ಬಾಡಿಗೆ ಕೇಳುತ್ತಿರಲಿಲ್ಲ. ಸುಚಿತ್ರ ಅಕಾಡೆಮಿಯು 2015ರಲ್ಲಿ ಪುರವಂಕರ ಸಂಸ್ಥೆಯೊಡನೆ ಒಪ್ಪಂದ ಮಾಡಿಕೊಂಡು, ಆ ಸಂಸ್ಥೆಯಿಂದ ಸಿಎಸ್‌ಆರ್‌ ನಿಧಿ ಮೂಲಕ ದೇಣಿಗೆಯನ್ನು ಪಡೆದು ಕಟ್ಟಡವನ್ನು ನವೀಕರಣ ಮಾಡಿತು. ಆಗ ಸುಚಿತ್ರ ಸಿನೆಮಾ ಮತ್ತು ಕಲ್ಚರಲ್‌‌ ಅಕಾಡೆಮಿ ಎಂದಿದ್ದ ಟ್ರಸ್ಟ್ ಹೆಸರನ್ನು ಪುರವಂಕರ ಸುಚಿತ್ರ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಎಂದು ಬದಲಾಯಿಸಲಾಯಿತು. ಆವರೆಗೆ ಟ್ರಸ್ಟ್‌‌ನ ಖಾಯಂ ಸದಸ್ಯತ್ವ ಇದ್ದ ಸುಚಿತ್ರ ಫಿಲ್ಮ್‌‌ ಸೊಸೈಟಿಯ ಅಧ್ಯಕ್ಷರನ್ನು ಆಹ್ವಾನಿತರು ಎಂದು ಬದಲಿಸಲಾಯಿತು. ಅಲ್ಲದೇ ಸೋಸೈಟಿಯ ಅಧ್ಯಕ್ಷರನ್ನು ಯಾವುದೇ ಸೂಚನೆ ಇಲ್ಲದೆ ಟ್ರಸ್ಟ್‌ನಿಂದ ಹೊರಹಾಕಲಾಯಿತು” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಬಿ.ಸುರೇಶ್‌‌ ಮಾತನಾಡಿದರು.

“ನಂತರದ ಬೆಳವಣಿಗೆಯಲ್ಲಿ ಸುಚಿತ್ರ ಟ್ರಸ್ಟ್ ಸಭಾಂಗಣಗಳ ಬಾಡಿಗೆ ದರ ಹೆಚ್ಚಳ ಮಾಡಿದೆ, ಸುಚಿತ್ರ ಫಿಲ್ಮ್‌‌ ಸೊಸೈಟಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಹಿಂಪಡೆದಿದೆ, ಇದರಿಂದಾಗಿ ಸಭಾಂಗಣದ ಬಾಡಿಗೆಯು ಮೂರು ಪಟ್ಟು ಹೆಚ್ಚಾಗುತ್ತದೆ. ಸುಚಿತ್ರ ಫಿಲ್ಮ್‌ ಸೊಸೈಟಿಯ ಕಚೇರಿ ನಡೆಸಲು ಪ್ರತಿ ತಿಂಗಳು 50,000 ರೂ.ಗಳನ್ನು ದೇಣಿಗೆಯಾಗಿ ನೀಡಬೇಕೆಂದು ತಿಳಿಸಲಾಗಿದೆ. ಸದಸ್ಯತ್ವದ ಹಣದಲ್ಲಿಯೇ ನಡೆಯಬೇಕಾದ ಫಿಲ್ಮ್‌‌ ಸೊಸೈಟಿಗೆ ಈ ದುಬಾರೀ ದರ ಆಘಾತ ತಂದಿದೆ.  ಕಳೆದ 9 ತಿಂಗಳಿನಿಂದ ಫಿಲ್ಮ್‌ ಸೊಸೈಟಿಗೆ ಸುಚಿತ್ರ ಪ್ರಾಂಗಣದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲಾಗದಂತಾಗಿದೆ” ಎಂದು ಹೇಳಿದರು.

“2021ರ ಮಾರ್ಚ್ 24ರವರೆಗೆ ಹಳೆಯ ದರದಲ್ಲಿ ಬಾಡಿಗೆಯನ್ನು ಕೊಟ್ಟಿದ್ದರೂ, ಪರಿಷ್ಕೃತ ದರದಂತೆ ಬಾಡಿಗೆಯನ್ನು ನೀಡಲು ಮತ್ತು ಸುಚಿತ್ರ ಕಚೇರಿಯ ಬಳಕೆಗಾಗಿ ತಿಂಗಳಿಗೆ 50,000 ರೂ. ನಂತೆ ಜನವರಿ 21ರಿಂದ, ಒಟ್ಟು 7 ಲಕ್ಷ ರೂಪಾಯಿಗಳನ್ನು ಕೊಡಲು ಪತ್ರ ಮುಖೇನ ಒತ್ತಾಯಿಸಲಾಗುತ್ತಿದೆ. (ಇದರಲ್ಲಿ ಫಿಲ್ಮ್‌ ಸೊಸೈಟಿಯು ಈ ಹಿಂದೆ ಕೋವಿಡ್ ಸಂಕಷ್ಟದ ಕಾಲದಲ್ಲಿ ನೀಡಿದ 2 ಲಕ್ಷ ರೂ.ಗಳ ಮುಂಗಡ ಹಣವನ್ನು ಸಹ ಮುರಿದುಕೊಳ್ಳಲಾಗಿದೆ.) ಜೊತೆಗೆ ಎರಡು ಲಾಯರ್ ನೋಟೀಸ್ ಸಹ ಸುಚಿತ್ರ ಫಿಲ್ಮ್‌ ಸೊಸೈಟಿಗೆ ಸುಚಿತ್ರ ಟ್ರಸ್ಟ್ ಕಳುಹಿಸಿದೆ” ಎಂದು ಮಾಹಿತಿ ನೀಡಿದರು.

“ಸುಚಿತ್ರ ಫಿಲ್ಮ್‌ ಸೊಸೈಟಿಯನ್ನು ಟ್ರಸ್ಟ್‌ ಜಾಗದಲ್ಲಿ ನಡೆಸುತ್ತಿದ್ದೀರಿ. ತಿಂಗಳಿಗೆ 50,000 ರೂಪಾಯಿ ಕೊಡಬೇಕು ಎಂದು ಲಾಯರ್‌ ನೋಟೀಸ್ ಕಳುಹಿಸಲಾಗಿದೆ. ವರ್ಷಕ್ಕೆ 6,00,000 ರೂಪಾಯಿ ಬಾಡಿಗೆಯನ್ನು ಕಟ್ಟಬೇಕಾಗುತ್ತದೆ. ಸುಚಿತ್ರ ಫಿಲ್ಮ್‌ ಸೊಸೈಟಿಗೆ ವರ್ಷಕ್ಕೆ ಬರುವ ಆದಾಯವೇ ನಾಲ್ಕು ಲಕ್ಷ ಅಥವಾ ನಾಲ್ಕೂವರೆ ಲಕ್ಷ ರೂ. ದಾಟುವುದಿಲ್ಲ. ಬರುವ ಹಣವನ್ನೆಲ್ಲ ಬಾಡಿಗೆ ಕಟ್ಟಿದರೆ ಕಾರ್ಯಕ್ರಮಗಳನ್ನು ಮಾಡುವುದು ಹೇಗೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...