Homeಮುಖಪುಟಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಸಂಯುಕ್ತ ಕಿಸಾನ್ ಮೋರ್ಚಾ ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ SKM ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

- Advertisement -
- Advertisement -

ಪಂಜಾಬ್‌ನ ಸುಮಾರು 20ಕ್ಕೂ ಹೆಚ್ಚು ರೈತ ಸಂಘಟನೆಗಳು ಒಗ್ಗೂಡಿ ‘ಸಂಯುಕ್ತ ಸಮಾಜ್ ಮೋರ್ಚಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸುವುದರ ಜೊತೆಗೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ರೈತ ಹೋರಾಟವನ್ನು ಮುನ್ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್‌ರವರ ನೇತೃತ್ವದಲ್ಲಿ 117 ಕ್ಷೇತ್ರಗಳಲ್ಲಿಯೂ ಸಂಯುಕ್ತ ಸಮಾಜ್ ಮೋರ್ಚಾ ಸ್ಪರ್ಧಿಸಲಿದೆ ಎನ್ನಲಾಗಿದೆ. ಬಿಕೆಯು(ಡಕೊಂಡ), ಬಿಕೆಯು (ಲಖಾವಾಲ್) ಸೇರಿ ಇನ್ನಿತರ ಸಂಘಟನೆಗಳು ಈ ರಾಜಕೀಯ ಪಕ್ಷದ ಜೊತೆ ಸೇರಿಕೊಳ್ಳುತ್ತವೆಯೇ ಎಂಬುದಿನ್ನು ಸ್ಪಷ್ಟವಾಗಿಲ್ಲ. ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ಇನ್ನೊಂದೆಡೆ ಸಂಯುಕ್ತ ಕಿಸಾನ್ ಮೋರ್ಚಾ ಈ ಇಡೀ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದೆ. ಸಂಯುಕ್ತ ಕಿಸಾನ್ ಮೋರ್ಚಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದರೊಂದಿಗೆ ಡಜನ್‌ಗೂ ಹೆಚ್ಚು ಸಂಘಟನೆಗಳು ಜನ ಚಳವಳಿಯಲ್ಲಿ ನಂಬಿಕೆಯಿಟ್ಟಿವೆ ಎಂದು ಹೇಳಿಕೆ ಮೂಲಕ ತಿಳಿಸಿದೆ.

ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಡಾ.ದರ್ಶನ್ ಪಾಲ್ ಜಂಟಿ ಪತ್ರಿಕಾ ಹೇಳಿಕೆ ನೀಡಿ, “ದೇಶಾದ್ಯಂತ 400 ಕ್ಕೂ ಹೆಚ್ಚು ವಿವಿಧ ಸೈದ್ಧಾಂತಿಕ ಸಂಘಟನೆಗಳ ವೇದಿಕೆಯಾಗಿರುವ ಎಸ್‌ಕೆಎಂ ರೈತರ ಸಮಸ್ಯೆಗಳಿಗಾಗಿ ಮಾತ್ರ ರೂಪುಗೊಂಡಿದೆ. ಸರ್ಕಾರದಿಂದ ತಮ್ಮ ಹಕ್ಕುಗಳನ್ನು ಪಡೆಯಲು ಜನರಿಂದ ರಚಿಸಲಾಗ ಒಕ್ಕೂಟವು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಹೋರಾಟವನ್ನು ಸ್ಥಗಿತಗೊಳಿಸಿದೆ. ಅದು ಚುನಾವಣೆ ಬಹಿಷ್ಕಾರದ ಕರೆ ಕೂಡ ನೀಡುವುದಿಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಎಸ್‌ಕೆಎಂ ಅಥವಾ 32 ಸಂಘಟನೆಗಳ ಹೆಸರನ್ನು ಯಾರೂ ಬಳಸಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ನಮ್ಮ ಉಳಿದ ಬೇಡಿಕೆಗಳನ್ನು (ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ ಸೇರಿ) ಜನವರಿ 15, 2022 ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಂಘಟನೆಗಳು ತಮ್ಮ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ 32 ಸಂಘಟನೆಗಳ ಹೆಸರು ಮತ್ತು ಎಸ್‌ಕೆಎಂ ಹೆಸರು ಬಳಸಿಕೊಂಡಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್‌ಕೆಎಂ ಎಚ್ಚರಿಸಿದೆ.

SKM ಒಕ್ಕೂಟದ ಭಾಗವಾಗಿರುವ ಅನೇಕ ರೈತ ಸಂಘಗಳು ಚುನಾವಣಾ ರಾಜಕೀಯದಿಂದ ದೂರವಿರಲು ನಿರ್ಧರಿಸಿವೆ. ಕೀರ್ತಿ ಕಿಸಾನ್ ಯೂನಿಯನ್, ಕ್ರಾಂತಿಕಾರಿ ಕಿಸಾನ್ ಯೂನಿಯನ್, ಬಿಕೆಯು-ಕ್ರಾಂತಿಕಾರಿ, ದೋಬಾ ಸಂಘರ್ಷ ಸಮಿತಿ, ಬಿಕೆಯು-ಸಿಧುಪುರ್, ಕಿಸಾನ್ ಸಂಘರ್ಷ ಸಮಿತಿ ಮತ್ತು ಜೈ ಕಿಸಾನ್ ಆಂದೋಲನಗಳು ಚುನಾವಣೆಯಲ್ಲಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟ ನಿಲುವು ತೆಗೆದುಕೊಂಡಿವೆ ಎಂದು ಎಸ್‌ಕೆಎಂ ಹೇಳಿದೆ.

ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಈಗಾಗಲೇ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅದನ್ನು ಸಂಯುಕ್ತ ಸಂಘರ್ಷ್ ಪಕ್ಷ ಎಂದು ಕರೆದಿದ್ದು, ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಹೊಸ ಪಕ್ಷ ಪ್ರಾರಂಭಿಸಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...