Homeಮುಖಪುಟಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಸಂಯುಕ್ತ ಕಿಸಾನ್ ಮೋರ್ಚಾ ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ SKM ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

- Advertisement -
- Advertisement -

ಪಂಜಾಬ್‌ನ ಸುಮಾರು 20ಕ್ಕೂ ಹೆಚ್ಚು ರೈತ ಸಂಘಟನೆಗಳು ಒಗ್ಗೂಡಿ ‘ಸಂಯುಕ್ತ ಸಮಾಜ್ ಮೋರ್ಚಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸುವುದರ ಜೊತೆಗೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ರೈತ ಹೋರಾಟವನ್ನು ಮುನ್ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್‌ರವರ ನೇತೃತ್ವದಲ್ಲಿ 117 ಕ್ಷೇತ್ರಗಳಲ್ಲಿಯೂ ಸಂಯುಕ್ತ ಸಮಾಜ್ ಮೋರ್ಚಾ ಸ್ಪರ್ಧಿಸಲಿದೆ ಎನ್ನಲಾಗಿದೆ. ಬಿಕೆಯು(ಡಕೊಂಡ), ಬಿಕೆಯು (ಲಖಾವಾಲ್) ಸೇರಿ ಇನ್ನಿತರ ಸಂಘಟನೆಗಳು ಈ ರಾಜಕೀಯ ಪಕ್ಷದ ಜೊತೆ ಸೇರಿಕೊಳ್ಳುತ್ತವೆಯೇ ಎಂಬುದಿನ್ನು ಸ್ಪಷ್ಟವಾಗಿಲ್ಲ. ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ಇನ್ನೊಂದೆಡೆ ಸಂಯುಕ್ತ ಕಿಸಾನ್ ಮೋರ್ಚಾ ಈ ಇಡೀ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದೆ. ಸಂಯುಕ್ತ ಕಿಸಾನ್ ಮೋರ್ಚಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದರೊಂದಿಗೆ ಡಜನ್‌ಗೂ ಹೆಚ್ಚು ಸಂಘಟನೆಗಳು ಜನ ಚಳವಳಿಯಲ್ಲಿ ನಂಬಿಕೆಯಿಟ್ಟಿವೆ ಎಂದು ಹೇಳಿಕೆ ಮೂಲಕ ತಿಳಿಸಿದೆ.

ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಡಾ.ದರ್ಶನ್ ಪಾಲ್ ಜಂಟಿ ಪತ್ರಿಕಾ ಹೇಳಿಕೆ ನೀಡಿ, “ದೇಶಾದ್ಯಂತ 400 ಕ್ಕೂ ಹೆಚ್ಚು ವಿವಿಧ ಸೈದ್ಧಾಂತಿಕ ಸಂಘಟನೆಗಳ ವೇದಿಕೆಯಾಗಿರುವ ಎಸ್‌ಕೆಎಂ ರೈತರ ಸಮಸ್ಯೆಗಳಿಗಾಗಿ ಮಾತ್ರ ರೂಪುಗೊಂಡಿದೆ. ಸರ್ಕಾರದಿಂದ ತಮ್ಮ ಹಕ್ಕುಗಳನ್ನು ಪಡೆಯಲು ಜನರಿಂದ ರಚಿಸಲಾಗ ಒಕ್ಕೂಟವು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಹೋರಾಟವನ್ನು ಸ್ಥಗಿತಗೊಳಿಸಿದೆ. ಅದು ಚುನಾವಣೆ ಬಹಿಷ್ಕಾರದ ಕರೆ ಕೂಡ ನೀಡುವುದಿಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಎಸ್‌ಕೆಎಂ ಅಥವಾ 32 ಸಂಘಟನೆಗಳ ಹೆಸರನ್ನು ಯಾರೂ ಬಳಸಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ನಮ್ಮ ಉಳಿದ ಬೇಡಿಕೆಗಳನ್ನು (ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ ಸೇರಿ) ಜನವರಿ 15, 2022 ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಂಘಟನೆಗಳು ತಮ್ಮ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ 32 ಸಂಘಟನೆಗಳ ಹೆಸರು ಮತ್ತು ಎಸ್‌ಕೆಎಂ ಹೆಸರು ಬಳಸಿಕೊಂಡಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್‌ಕೆಎಂ ಎಚ್ಚರಿಸಿದೆ.

SKM ಒಕ್ಕೂಟದ ಭಾಗವಾಗಿರುವ ಅನೇಕ ರೈತ ಸಂಘಗಳು ಚುನಾವಣಾ ರಾಜಕೀಯದಿಂದ ದೂರವಿರಲು ನಿರ್ಧರಿಸಿವೆ. ಕೀರ್ತಿ ಕಿಸಾನ್ ಯೂನಿಯನ್, ಕ್ರಾಂತಿಕಾರಿ ಕಿಸಾನ್ ಯೂನಿಯನ್, ಬಿಕೆಯು-ಕ್ರಾಂತಿಕಾರಿ, ದೋಬಾ ಸಂಘರ್ಷ ಸಮಿತಿ, ಬಿಕೆಯು-ಸಿಧುಪುರ್, ಕಿಸಾನ್ ಸಂಘರ್ಷ ಸಮಿತಿ ಮತ್ತು ಜೈ ಕಿಸಾನ್ ಆಂದೋಲನಗಳು ಚುನಾವಣೆಯಲ್ಲಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟ ನಿಲುವು ತೆಗೆದುಕೊಂಡಿವೆ ಎಂದು ಎಸ್‌ಕೆಎಂ ಹೇಳಿದೆ.

ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಈಗಾಗಲೇ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅದನ್ನು ಸಂಯುಕ್ತ ಸಂಘರ್ಷ್ ಪಕ್ಷ ಎಂದು ಕರೆದಿದ್ದು, ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಹೊಸ ಪಕ್ಷ ಪ್ರಾರಂಭಿಸಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...