Homeಮುಖಪುಟಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಸಂಯುಕ್ತ ಕಿಸಾನ್ ಮೋರ್ಚಾ ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ SKM ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

- Advertisement -
- Advertisement -

ಪಂಜಾಬ್‌ನ ಸುಮಾರು 20ಕ್ಕೂ ಹೆಚ್ಚು ರೈತ ಸಂಘಟನೆಗಳು ಒಗ್ಗೂಡಿ ‘ಸಂಯುಕ್ತ ಸಮಾಜ್ ಮೋರ್ಚಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸುವುದರ ಜೊತೆಗೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ರೈತ ಹೋರಾಟವನ್ನು ಮುನ್ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್‌ರವರ ನೇತೃತ್ವದಲ್ಲಿ 117 ಕ್ಷೇತ್ರಗಳಲ್ಲಿಯೂ ಸಂಯುಕ್ತ ಸಮಾಜ್ ಮೋರ್ಚಾ ಸ್ಪರ್ಧಿಸಲಿದೆ ಎನ್ನಲಾಗಿದೆ. ಬಿಕೆಯು(ಡಕೊಂಡ), ಬಿಕೆಯು (ಲಖಾವಾಲ್) ಸೇರಿ ಇನ್ನಿತರ ಸಂಘಟನೆಗಳು ಈ ರಾಜಕೀಯ ಪಕ್ಷದ ಜೊತೆ ಸೇರಿಕೊಳ್ಳುತ್ತವೆಯೇ ಎಂಬುದಿನ್ನು ಸ್ಪಷ್ಟವಾಗಿಲ್ಲ. ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ಇನ್ನೊಂದೆಡೆ ಸಂಯುಕ್ತ ಕಿಸಾನ್ ಮೋರ್ಚಾ ಈ ಇಡೀ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದೆ. ಸಂಯುಕ್ತ ಕಿಸಾನ್ ಮೋರ್ಚಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದರೊಂದಿಗೆ ಡಜನ್‌ಗೂ ಹೆಚ್ಚು ಸಂಘಟನೆಗಳು ಜನ ಚಳವಳಿಯಲ್ಲಿ ನಂಬಿಕೆಯಿಟ್ಟಿವೆ ಎಂದು ಹೇಳಿಕೆ ಮೂಲಕ ತಿಳಿಸಿದೆ.

ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಡಾ.ದರ್ಶನ್ ಪಾಲ್ ಜಂಟಿ ಪತ್ರಿಕಾ ಹೇಳಿಕೆ ನೀಡಿ, “ದೇಶಾದ್ಯಂತ 400 ಕ್ಕೂ ಹೆಚ್ಚು ವಿವಿಧ ಸೈದ್ಧಾಂತಿಕ ಸಂಘಟನೆಗಳ ವೇದಿಕೆಯಾಗಿರುವ ಎಸ್‌ಕೆಎಂ ರೈತರ ಸಮಸ್ಯೆಗಳಿಗಾಗಿ ಮಾತ್ರ ರೂಪುಗೊಂಡಿದೆ. ಸರ್ಕಾರದಿಂದ ತಮ್ಮ ಹಕ್ಕುಗಳನ್ನು ಪಡೆಯಲು ಜನರಿಂದ ರಚಿಸಲಾಗ ಒಕ್ಕೂಟವು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಹೋರಾಟವನ್ನು ಸ್ಥಗಿತಗೊಳಿಸಿದೆ. ಅದು ಚುನಾವಣೆ ಬಹಿಷ್ಕಾರದ ಕರೆ ಕೂಡ ನೀಡುವುದಿಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಎಸ್‌ಕೆಎಂ ಅಥವಾ 32 ಸಂಘಟನೆಗಳ ಹೆಸರನ್ನು ಯಾರೂ ಬಳಸಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ನಮ್ಮ ಉಳಿದ ಬೇಡಿಕೆಗಳನ್ನು (ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ ಸೇರಿ) ಜನವರಿ 15, 2022 ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಂಘಟನೆಗಳು ತಮ್ಮ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ 32 ಸಂಘಟನೆಗಳ ಹೆಸರು ಮತ್ತು ಎಸ್‌ಕೆಎಂ ಹೆಸರು ಬಳಸಿಕೊಂಡಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್‌ಕೆಎಂ ಎಚ್ಚರಿಸಿದೆ.

SKM ಒಕ್ಕೂಟದ ಭಾಗವಾಗಿರುವ ಅನೇಕ ರೈತ ಸಂಘಗಳು ಚುನಾವಣಾ ರಾಜಕೀಯದಿಂದ ದೂರವಿರಲು ನಿರ್ಧರಿಸಿವೆ. ಕೀರ್ತಿ ಕಿಸಾನ್ ಯೂನಿಯನ್, ಕ್ರಾಂತಿಕಾರಿ ಕಿಸಾನ್ ಯೂನಿಯನ್, ಬಿಕೆಯು-ಕ್ರಾಂತಿಕಾರಿ, ದೋಬಾ ಸಂಘರ್ಷ ಸಮಿತಿ, ಬಿಕೆಯು-ಸಿಧುಪುರ್, ಕಿಸಾನ್ ಸಂಘರ್ಷ ಸಮಿತಿ ಮತ್ತು ಜೈ ಕಿಸಾನ್ ಆಂದೋಲನಗಳು ಚುನಾವಣೆಯಲ್ಲಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟ ನಿಲುವು ತೆಗೆದುಕೊಂಡಿವೆ ಎಂದು ಎಸ್‌ಕೆಎಂ ಹೇಳಿದೆ.

ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಈಗಾಗಲೇ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅದನ್ನು ಸಂಯುಕ್ತ ಸಂಘರ್ಷ್ ಪಕ್ಷ ಎಂದು ಕರೆದಿದ್ದು, ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಹೊಸ ಪಕ್ಷ ಪ್ರಾರಂಭಿಸಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...