Homeಮುಖಪುಟಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಸಂಯುಕ್ತ ಕಿಸಾನ್ ಮೋರ್ಚಾ ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ SKM ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

- Advertisement -
- Advertisement -

ಪಂಜಾಬ್‌ನ ಸುಮಾರು 20ಕ್ಕೂ ಹೆಚ್ಚು ರೈತ ಸಂಘಟನೆಗಳು ಒಗ್ಗೂಡಿ ‘ಸಂಯುಕ್ತ ಸಮಾಜ್ ಮೋರ್ಚಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸುವುದರ ಜೊತೆಗೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ರೈತ ಹೋರಾಟವನ್ನು ಮುನ್ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಈ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದು, ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೆಸರು ಬಳಸಿಕೊಳ್ಳದಂತೆ ತಾಕೀತು ಮಾಡಿದೆ.

ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್‌ರವರ ನೇತೃತ್ವದಲ್ಲಿ 117 ಕ್ಷೇತ್ರಗಳಲ್ಲಿಯೂ ಸಂಯುಕ್ತ ಸಮಾಜ್ ಮೋರ್ಚಾ ಸ್ಪರ್ಧಿಸಲಿದೆ ಎನ್ನಲಾಗಿದೆ. ಬಿಕೆಯು(ಡಕೊಂಡ), ಬಿಕೆಯು (ಲಖಾವಾಲ್) ಸೇರಿ ಇನ್ನಿತರ ಸಂಘಟನೆಗಳು ಈ ರಾಜಕೀಯ ಪಕ್ಷದ ಜೊತೆ ಸೇರಿಕೊಳ್ಳುತ್ತವೆಯೇ ಎಂಬುದಿನ್ನು ಸ್ಪಷ್ಟವಾಗಿಲ್ಲ. ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ಇನ್ನೊಂದೆಡೆ ಸಂಯುಕ್ತ ಕಿಸಾನ್ ಮೋರ್ಚಾ ಈ ಇಡೀ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದೆ. ಸಂಯುಕ್ತ ಕಿಸಾನ್ ಮೋರ್ಚಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದರೊಂದಿಗೆ ಡಜನ್‌ಗೂ ಹೆಚ್ಚು ಸಂಘಟನೆಗಳು ಜನ ಚಳವಳಿಯಲ್ಲಿ ನಂಬಿಕೆಯಿಟ್ಟಿವೆ ಎಂದು ಹೇಳಿಕೆ ಮೂಲಕ ತಿಳಿಸಿದೆ.

ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಡಾ.ದರ್ಶನ್ ಪಾಲ್ ಜಂಟಿ ಪತ್ರಿಕಾ ಹೇಳಿಕೆ ನೀಡಿ, “ದೇಶಾದ್ಯಂತ 400 ಕ್ಕೂ ಹೆಚ್ಚು ವಿವಿಧ ಸೈದ್ಧಾಂತಿಕ ಸಂಘಟನೆಗಳ ವೇದಿಕೆಯಾಗಿರುವ ಎಸ್‌ಕೆಎಂ ರೈತರ ಸಮಸ್ಯೆಗಳಿಗಾಗಿ ಮಾತ್ರ ರೂಪುಗೊಂಡಿದೆ. ಸರ್ಕಾರದಿಂದ ತಮ್ಮ ಹಕ್ಕುಗಳನ್ನು ಪಡೆಯಲು ಜನರಿಂದ ರಚಿಸಲಾಗ ಒಕ್ಕೂಟವು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಹೋರಾಟವನ್ನು ಸ್ಥಗಿತಗೊಳಿಸಿದೆ. ಅದು ಚುನಾವಣೆ ಬಹಿಷ್ಕಾರದ ಕರೆ ಕೂಡ ನೀಡುವುದಿಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಎಸ್‌ಕೆಎಂ ಅಥವಾ 32 ಸಂಘಟನೆಗಳ ಹೆಸರನ್ನು ಯಾರೂ ಬಳಸಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ನಮ್ಮ ಉಳಿದ ಬೇಡಿಕೆಗಳನ್ನು (ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ ಸೇರಿ) ಜನವರಿ 15, 2022 ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಂಘಟನೆಗಳು ತಮ್ಮ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ 32 ಸಂಘಟನೆಗಳ ಹೆಸರು ಮತ್ತು ಎಸ್‌ಕೆಎಂ ಹೆಸರು ಬಳಸಿಕೊಂಡಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್‌ಕೆಎಂ ಎಚ್ಚರಿಸಿದೆ.

SKM ಒಕ್ಕೂಟದ ಭಾಗವಾಗಿರುವ ಅನೇಕ ರೈತ ಸಂಘಗಳು ಚುನಾವಣಾ ರಾಜಕೀಯದಿಂದ ದೂರವಿರಲು ನಿರ್ಧರಿಸಿವೆ. ಕೀರ್ತಿ ಕಿಸಾನ್ ಯೂನಿಯನ್, ಕ್ರಾಂತಿಕಾರಿ ಕಿಸಾನ್ ಯೂನಿಯನ್, ಬಿಕೆಯು-ಕ್ರಾಂತಿಕಾರಿ, ದೋಬಾ ಸಂಘರ್ಷ ಸಮಿತಿ, ಬಿಕೆಯು-ಸಿಧುಪುರ್, ಕಿಸಾನ್ ಸಂಘರ್ಷ ಸಮಿತಿ ಮತ್ತು ಜೈ ಕಿಸಾನ್ ಆಂದೋಲನಗಳು ಚುನಾವಣೆಯಲ್ಲಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟ ನಿಲುವು ತೆಗೆದುಕೊಂಡಿವೆ ಎಂದು ಎಸ್‌ಕೆಎಂ ಹೇಳಿದೆ.

ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಈಗಾಗಲೇ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅದನ್ನು ಸಂಯುಕ್ತ ಸಂಘರ್ಷ್ ಪಕ್ಷ ಎಂದು ಕರೆದಿದ್ದು, ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಹೊಸ ಪಕ್ಷ ಪ್ರಾರಂಭಿಸಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....