ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಮತ್ತೆ ಲಾಕ್ಡೌನ್ ಘೋಷಣೆಯಾಗುವ ಮುನ್ಸೂಚನೆಯನ್ನು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಹಬ್ಬದ ಅವಧಿಯಲ್ಲಿ ಭಾರಿ ಜನಸಂದಣಿ ಸೇರಿರುವುದರಿಂದ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್ ಪ್ರೇರಿತ ಲಾಕ್ಡೌನ್ ಬಗ್ಗೆ ಯೋಚಿಸಲಾಗುತ್ತಿದೆ ಎಂದಿದ್ದಾರೆ.
“ದೀಪಾವಳಿ ಅವಧಿಯಲ್ಲಿ ಭಾರಿ ಜನಸಂದಣಿ ಇತ್ತು. ಗಣೇಶ ಚತುರ್ಥಿಯ ಸಮಯದಲ್ಲಿಯೂ ನಾವು ಭಾರಿ ಜನಸಂದಣಿಯನ್ನು ನೋಡಿದೆವು. ಸದ್ಯ ನಾವು ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡುತ್ತಿದ್ದೇವೆ. ಮುಂದಿನ 8-10 ದಿನಗಳವರೆಗೆ ನಾವು ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ. ನಂತರ ಲಾಕ್ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು”ಎಂದು ಪುಣೆಯಲ್ಲಿ ಅಜಿತ್ ಪವಾರ್ ಹೇಳಿದ್ದಾರೆ.
During Diwali, there was a huge crowd as if Corona itself died due to heavy crowd. Now there are predictions that 2nd wave may come. Govt has made a lot of regulations to start schools which includes different ways as to how they should be sanitized: Maharashtra Deputy CM https://t.co/P4VxVnZYhF
— ANI (@ANI) November 22, 2020
ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!
“ಈಗ ಕೊರೊನಾ ಎರಡನೇ ಅಲೆ ಆರಂಭವಾಗುವ ಮುನ್ಸೂಚನೆಗಳು ಇವೆ. ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸಾಕಷ್ಟು ನಿಯಮಗಳನ್ನು ಮಾಡಿದೆ, ಅವುಗಳು ಹೇಗೆ ಸ್ವಚ್ಛಗೊಳಿಸಬೇಕು ಎಂಬುದರ ಕುರಿತು ವಿಭಿನ್ನ ಮಾರ್ಗಗಳನ್ನು ನಿಯಮ ಒಳಗೊಂಡಿದೆ” ಎಂದು ಮಾಹಿತಿ ನೀಡಿದ್ದಾರೆ.
ಸ್ಥಳೀಯ ಪ್ರದೇಶಗಳಲ್ಲಿನ ಕೊರೊನಾ ಪರಿಸ್ಥಿತಿಗೆ ಅನುಗುಣವಾಗಿ ನಾಳೆ 9 ರಿಂದ 12 ನೇ ತರಗತಿಗಳಿಗೆ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ತಮ್ಮ ಜಿಲ್ಲೆಗಳಲ್ಲಿ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳ ಪುನರಾರಂಭ ಮಾಡಬಹುದು ಎಂದು ರಾಜ್ಯ ಸರ್ಕಾರ ಹೇಳಿದ್ದ ಬೆನ್ನಲ್ಲೇ ಪಿಂಪ್ರಿ ಚಿಂಚ್ವಾಡ್ನಲ್ಲಿ ನವೆಂಬರ್ 30 ರವರೆಗೆ ಶಾಲೆ ರಿಓಪನ್ ಮುಂದೂಡಲಾಗಿದೆ.
“ಪುಣೆಯ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷಿಸಿದ 5,671 ಕೊರೊನಾ ಮಾದರಿಗಳಲ್ಲಿ ಒಟ್ಟು 17 ಶಿಕ್ಷಕರು ಮತ್ತು ಬೋಧನಾ ಸಿಬ್ಬಂದಿ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಹೆಚ್ಚಿನ ಶಿಕ್ಷಕರು ಮತ್ತು ಬೋಧನಾ ಸಿಬ್ಬಂದಿಯನ್ನು ಪರೀಕ್ಷಿಸಲಾಗುವುದು” ಎಂದು ಪುಣೆ ಜಿಲ್ಲಾ ಪರಿಷತ್ ತಿಳಿಸಿದೆ.
“ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರ್ಕಾರ ವಿವಿಧ ಕ್ರಮಗಳನ್ನು ಚರ್ಚಿಸಲಾಗುತ್ತಿದೆ. ಅದರಲ್ಲಿ ಇಲ್ಲಿಂದ ದೆಹಲಿಗೆ ಮತ್ತು ಅಲ್ಲಿಂದ ಇಲ್ಲಿಗೆ ರೈಲು ಮತ್ತು ವಿಮಾನಯಾನ ಸಂಚಾರವನ್ನು ಸ್ಥಗಿತಗೊಳಿಸುವುದು ಕೂಡ ಒಂದು. ಆದರೆ ಈ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.


