Homeಮುಖಪುಟರಾಜ್ಯದಲ್ಲಿ ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ನ.26ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್!

ರಾಜ್ಯದಲ್ಲಿ ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ನ.26ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್!

- Advertisement -
- Advertisement -

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭುಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ನವೆಂಬರ್ 26 ರಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಮಾತನಾಡಿ, “ನರೇಂದ್ರ ಮೋದಿಯವರು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಎಂಎಸ್‌ಪಿ ಬಗ್ಗೆ, ವಿದ್ಯುಚ್ಛಕ್ತಿ ಮಸೂದೆ ಅವರು ಮಾತನಾಡಿಲ್ಲ. ಗಡಿಗಳಲ್ಲಿ ಹುತಾತ್ಮರಾದ 670ಕ್ಕೂ ಹೆಚ್ಚು ರೈತರ ಬಗ್ಗೆ, ಅವರಿಗೆ ಪರಿಹಾರ ಕೊಡುವ ಚಕಾರವೆತ್ತಿಲ್ಲ. ಇನ್ನು ರಾಜ್ಯ ಸರ್ಕಾರವೂ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯಬೇಕಾಗಿತ್ತು. ಅದಕ್ಕಾಗಿ ನಾವು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದೇವೆ. ಹಾಗಾಗಿ ಎಲ್ಲಾ ಪ್ರಯಾಣಿಕರು ಅಂದು ಹಗಲಿನ ಪ್ರಯಾಣವನ್ನು ಜನತೆ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನ ಮೌರ್ಯ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆಯಿಂದ ಬೈಕ್ ಮತ್ತು ಕಾರು ರ್ಯಾಲಿ ಆರಂಭ. ವಿವಿಧ ಜಿಲ್ಲೆಗಳ ಹೆದ್ದಾರಿ ಬಂದ್ ಹೋರಾಟಗಳಲ್ಲಿಗೆ ಸೇರಿಕೊಳ್ಳುವುದು

ಕರ್ನಾಟಕ ರಾಜ್ಯದಲ್ಲಿ ನಡೆಯುವ ಹೆದ್ದಾರಿ ಬಂದ್ ವಿವರ ಈ ಕೆಳಗನಂತಿದೆ.

  1. ಶ್ರೀರಂಗಪಟ್ಟಣ – ರಾಷ್ಟ್ರೀಯ ಹೆದ್ದಾರಿ
  2. ತುಮಕೂರು – ಟೋಲ್ ಪ್ಲಾಜ
  3. ಚಿಕ್ಕಬಳ್ಳಾಪುರ ಜಿಲ್ಲೆ – ಚದಲಪುರ ಹಳೆ ಡಿಸಿ ಕಛೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ,
  4. ರಾಮನಗರ – ರಾಷ್ಟ್ರೀಯ ಹೆದ್ದಾರಿ
  5. ಚಾಮರಾಜನಗರ – ರಾಷ್ಟ್ರೀಯ ಹೆದ್ದಾರಿ
  6. ಗುಂಡ್ಲುಪೇಟೆ – ರಾಷ್ಟ್ರೀಯ ಹೆದ್ದಾರಿ
  7. ಕೊಡಗು (ಎಲ್ಲಾ ತಾಲ್ಲೂಕುಗಳಿಂದ ಕೊಡಗಿಗೆ ಬೈಕ್ ರ್ಯಾಲಿ)
  8. ಹಾಸನ
  9. ಶಿವಮೊಗ್ಗ – ಬಸ್ ಸ್ಟ್ಯಾಂಡ್ ಸರ್ಕಲ್
  10. ಚಿತ್ರದುರ್ಗ
  11. ಬಳ್ಳಾರಿ
  12. ಹೊಸಪೇಟೆ – ಕೊಪ್ಫಳ ರಾಷ್ಟ್ರೀಯ ಹೆದ್ದಾರಿ, ಗಣೇಶ್‌ಗುಡಿ ಹತ್ತಿರ
  13. ರಾಯಚೂರು – ಹೊರಭಾಗದಲ್ಲಿ ರುವ ಸಾತ್ ಮೈಲ್.
  14. ಸಿಂಧನೂರು- ನಗರದಲ್ಲಿನ ಮುಖ್ಯ ರಸ್ತೆ.
  1. ಬೆಳಗಾವಿ –
  2. ವಿಜಯಪುರ –
  3. ಗುಲ್ಬರ್ಗಾ –
  4. ಯಾದಗಿರಿ –
  5. ದಾವಣಗೆರೆ – ಜಯದೇವ ಸರ್ಕಲ್ ನಿಂದ ಎಸಿ ಕಚೇರಿಯವರೆಗೆ ಟ್ರ್ಯಾಕ್ಟರ್ ರ್ಯಾಲಿ.

ಇದನ್ನೂ ಓದಿ; ಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...