Homeಮುಖಪುಟರಾಜ್ಯದಲ್ಲಿ ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ನ.26ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್!

ರಾಜ್ಯದಲ್ಲಿ ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ನ.26ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್!

- Advertisement -
- Advertisement -

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭುಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ನವೆಂಬರ್ 26 ರಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಮಾತನಾಡಿ, “ನರೇಂದ್ರ ಮೋದಿಯವರು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಎಂಎಸ್‌ಪಿ ಬಗ್ಗೆ, ವಿದ್ಯುಚ್ಛಕ್ತಿ ಮಸೂದೆ ಅವರು ಮಾತನಾಡಿಲ್ಲ. ಗಡಿಗಳಲ್ಲಿ ಹುತಾತ್ಮರಾದ 670ಕ್ಕೂ ಹೆಚ್ಚು ರೈತರ ಬಗ್ಗೆ, ಅವರಿಗೆ ಪರಿಹಾರ ಕೊಡುವ ಚಕಾರವೆತ್ತಿಲ್ಲ. ಇನ್ನು ರಾಜ್ಯ ಸರ್ಕಾರವೂ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯಬೇಕಾಗಿತ್ತು. ಅದಕ್ಕಾಗಿ ನಾವು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದೇವೆ. ಹಾಗಾಗಿ ಎಲ್ಲಾ ಪ್ರಯಾಣಿಕರು ಅಂದು ಹಗಲಿನ ಪ್ರಯಾಣವನ್ನು ಜನತೆ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನ ಮೌರ್ಯ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆಯಿಂದ ಬೈಕ್ ಮತ್ತು ಕಾರು ರ್ಯಾಲಿ ಆರಂಭ. ವಿವಿಧ ಜಿಲ್ಲೆಗಳ ಹೆದ್ದಾರಿ ಬಂದ್ ಹೋರಾಟಗಳಲ್ಲಿಗೆ ಸೇರಿಕೊಳ್ಳುವುದು

ಕರ್ನಾಟಕ ರಾಜ್ಯದಲ್ಲಿ ನಡೆಯುವ ಹೆದ್ದಾರಿ ಬಂದ್ ವಿವರ ಈ ಕೆಳಗನಂತಿದೆ.

  1. ಶ್ರೀರಂಗಪಟ್ಟಣ – ರಾಷ್ಟ್ರೀಯ ಹೆದ್ದಾರಿ
  2. ತುಮಕೂರು – ಟೋಲ್ ಪ್ಲಾಜ
  3. ಚಿಕ್ಕಬಳ್ಳಾಪುರ ಜಿಲ್ಲೆ – ಚದಲಪುರ ಹಳೆ ಡಿಸಿ ಕಛೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ,
  4. ರಾಮನಗರ – ರಾಷ್ಟ್ರೀಯ ಹೆದ್ದಾರಿ
  5. ಚಾಮರಾಜನಗರ – ರಾಷ್ಟ್ರೀಯ ಹೆದ್ದಾರಿ
  6. ಗುಂಡ್ಲುಪೇಟೆ – ರಾಷ್ಟ್ರೀಯ ಹೆದ್ದಾರಿ
  7. ಕೊಡಗು (ಎಲ್ಲಾ ತಾಲ್ಲೂಕುಗಳಿಂದ ಕೊಡಗಿಗೆ ಬೈಕ್ ರ್ಯಾಲಿ)
  8. ಹಾಸನ
  9. ಶಿವಮೊಗ್ಗ – ಬಸ್ ಸ್ಟ್ಯಾಂಡ್ ಸರ್ಕಲ್
  10. ಚಿತ್ರದುರ್ಗ
  11. ಬಳ್ಳಾರಿ
  12. ಹೊಸಪೇಟೆ – ಕೊಪ್ಫಳ ರಾಷ್ಟ್ರೀಯ ಹೆದ್ದಾರಿ, ಗಣೇಶ್‌ಗುಡಿ ಹತ್ತಿರ
  13. ರಾಯಚೂರು – ಹೊರಭಾಗದಲ್ಲಿ ರುವ ಸಾತ್ ಮೈಲ್.
  14. ಸಿಂಧನೂರು- ನಗರದಲ್ಲಿನ ಮುಖ್ಯ ರಸ್ತೆ.
  1. ಬೆಳಗಾವಿ –
  2. ವಿಜಯಪುರ –
  3. ಗುಲ್ಬರ್ಗಾ –
  4. ಯಾದಗಿರಿ –
  5. ದಾವಣಗೆರೆ – ಜಯದೇವ ಸರ್ಕಲ್ ನಿಂದ ಎಸಿ ಕಚೇರಿಯವರೆಗೆ ಟ್ರ್ಯಾಕ್ಟರ್ ರ್ಯಾಲಿ.

ಇದನ್ನೂ ಓದಿ; ಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...