Homeಮುಖಪುಟರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

- Advertisement -
- Advertisement -

ರೈತ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಮುಖಂಡರಾದ ರಾಕೇಶ್‌ ಟಿಕಾಯತ್‌ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಜೂನ್‌ 9ರಂದು ಕೊಲ್ಕತ್ತಾದಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದರ ಕುರಿತು ಟಿಕಾಯತ್‌ರವರು ಮಮತಾ ಅವರೊಂದಿಗೆ ಚರ್ಚಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಚುನಾವಣೆಯಲ್ಲಿ ವಿಜಯ ಸಾಧಿಸಿದ್ದಕ್ಕೆ ಅಭಿನಂದಿಸಿ, ರೈತರ ಪ್ರತಿಭಟನೆಯ ಮುಂದಿನ ನಡೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಟಿಕಾಯತ್‌ ಪಂಚ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ರೈತ ವಿರೋಧಿ ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸಿದ್ದರು. ಅದೇ ಸಮಯದಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪರವಾಗಿ ಪ್ರಚಾರ ನಡೆಸಿದ್ದರು. ಅದೇ ರೀತಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊಸ ಕೃಷಿ ಕಾನೂನುಗಳ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತಿದ್ದರು. ಹಾಗೂ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಿಗೆ ಟಿಎಂಸಿಯ ಹಲವಾರು ಸಂಸದರು ಭೇಟಿ ನೀಡಿ ಬೆಂಬಲಿಸಿದ್ದರು. ಕೋವಿಡ್‌ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ, ಹೋರಾಟವನ್ನು ತೀವ್ರಗೊಳಿಸಲು ರೈತ ಮುಖಂಡರು ಯೋಜಿಸುತ್ತಿದ್ದಾರೆ.

ಹರಿಯಾಣದಲ್ಲಿ ಬಂಧಿತ ರೈತರ ಬಿಡುಗಡೆ

ಈ ನಡುವೆ, ಬಂಧಿತ ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಶನಿವಾರ ರಾತ್ರಿಯಿಂದ ಹರಿಯಾಣದ ಫತೇಬಾದ್‌ ಜಿಲ್ಲೆಯ ತೋಹಾನ ಸದರ್‌ ಪೊಲೀಸ್‌ ಠಾಣೆಯ ಎದುರು ರೈತ ಮುಖಂಡರಾದ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ನೇತೃತ್ವದಲ್ಲಿ ಸಾವಿರಾರ ರೈತರು ಪ್ರತಿಭಟನೆ ನಡೆಸಿದ್ದು, ಸೋಮವಾರ ಬಂಧಿತ ರೈತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಳೆದ ವರ್ಷ ರೈತ ವಿರೋಧಿಯಾದ ಮೂರು ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದನ್ನು ವಿರೋಧಿಸಿ, ಅವುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಚಳಿ, ಮಳೆ, ಬಿರು ಬಿಸಿಲು, ಬಿರುಗಾಳಿಗೂ ಅಂಜದೇ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಸರ್ಕಾರ ಹಲವು ಸುತ್ತಿನಲ್ಲಿ ಮಾತುಕತೆ ನಡೆಸಿದೆ. ಆದರೆ ಎಲ್ಲಾ ಮಾತುಕತೆಗಳು ವಿಫಲವಾಗಿದ್ದು ರೈತರು ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...