Homeಮುಖಪುಟರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

- Advertisement -
- Advertisement -

ರೈತ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಮುಖಂಡರಾದ ರಾಕೇಶ್‌ ಟಿಕಾಯತ್‌ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಜೂನ್‌ 9ರಂದು ಕೊಲ್ಕತ್ತಾದಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದರ ಕುರಿತು ಟಿಕಾಯತ್‌ರವರು ಮಮತಾ ಅವರೊಂದಿಗೆ ಚರ್ಚಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಚುನಾವಣೆಯಲ್ಲಿ ವಿಜಯ ಸಾಧಿಸಿದ್ದಕ್ಕೆ ಅಭಿನಂದಿಸಿ, ರೈತರ ಪ್ರತಿಭಟನೆಯ ಮುಂದಿನ ನಡೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಟಿಕಾಯತ್‌ ಪಂಚ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ರೈತ ವಿರೋಧಿ ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸಿದ್ದರು. ಅದೇ ಸಮಯದಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪರವಾಗಿ ಪ್ರಚಾರ ನಡೆಸಿದ್ದರು. ಅದೇ ರೀತಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊಸ ಕೃಷಿ ಕಾನೂನುಗಳ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತಿದ್ದರು. ಹಾಗೂ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಿಗೆ ಟಿಎಂಸಿಯ ಹಲವಾರು ಸಂಸದರು ಭೇಟಿ ನೀಡಿ ಬೆಂಬಲಿಸಿದ್ದರು. ಕೋವಿಡ್‌ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ, ಹೋರಾಟವನ್ನು ತೀವ್ರಗೊಳಿಸಲು ರೈತ ಮುಖಂಡರು ಯೋಜಿಸುತ್ತಿದ್ದಾರೆ.

ಹರಿಯಾಣದಲ್ಲಿ ಬಂಧಿತ ರೈತರ ಬಿಡುಗಡೆ

ಈ ನಡುವೆ, ಬಂಧಿತ ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಶನಿವಾರ ರಾತ್ರಿಯಿಂದ ಹರಿಯಾಣದ ಫತೇಬಾದ್‌ ಜಿಲ್ಲೆಯ ತೋಹಾನ ಸದರ್‌ ಪೊಲೀಸ್‌ ಠಾಣೆಯ ಎದುರು ರೈತ ಮುಖಂಡರಾದ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ನೇತೃತ್ವದಲ್ಲಿ ಸಾವಿರಾರ ರೈತರು ಪ್ರತಿಭಟನೆ ನಡೆಸಿದ್ದು, ಸೋಮವಾರ ಬಂಧಿತ ರೈತರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಳೆದ ವರ್ಷ ರೈತ ವಿರೋಧಿಯಾದ ಮೂರು ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದನ್ನು ವಿರೋಧಿಸಿ, ಅವುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಚಳಿ, ಮಳೆ, ಬಿರು ಬಿಸಿಲು, ಬಿರುಗಾಳಿಗೂ ಅಂಜದೇ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಸರ್ಕಾರ ಹಲವು ಸುತ್ತಿನಲ್ಲಿ ಮಾತುಕತೆ ನಡೆಸಿದೆ. ಆದರೆ ಎಲ್ಲಾ ಮಾತುಕತೆಗಳು ವಿಫಲವಾಗಿದ್ದು ರೈತರು ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....