Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...