Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...