Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...