Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...