Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...