Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...