Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...