Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....