Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...