Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...