Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....