Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...