Homeಮುಖಪುಟಕೊರೊನಾವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿ, SDRF ಹಣ ಬಳಸಲು ಬಿಡಿ- ಉದ್ಧವ್ ಠಾಕ್ರೆ

ಕೊರೊನಾವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿ, SDRF ಹಣ ಬಳಸಲು ಬಿಡಿ- ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಸಾಂಕ್ರಾಮಿಕ ಉಲ್ಬಣಗೊಂಡಿದ್ದು, ಕೊರೊನಾವನ್ನು “ನೈಸರ್ಗಿಕ ವಿಪತ್ತು” ಎಂದು ಘೋಷಿಸಿ, ಎಸ್‌ಡಿಆರ್‌ಎಫ್ ಹಣವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ತಮ್ಮ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಪರಿಣಾಮ ಹೆಚ್ಚು ಕೆಟ್ಟದಾಗಿದೆ. ಆರ್ಥಿಕ ಪರಿಹಾರ ನೀಡಲು ಕೊರೊನಾವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿ, ಎಸ್‌ಡಿಆರ್‌ಎಫ್ (state disaster response fund) ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯವು ಈಗ ಆರು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಕೊರೊನಾ ರೋಗಿಗಳ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಜನರಿಗೆ ಆರ್ಥಿಕ ಸಹಾಯದ ಅವಶ್ಯಕತೆಯಿದೆ. ಜೊತೆಗೆ “ಮಿನಿ-ಲಾಕ್‌ಡೌನ್ ಅವಶ್ಯಕತೆಯಾಗಿದೆ ಈಗ ಇದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಕೊರೊನಾ ಸಾಂಕ್ರಾಮಿಕದ ದೃಷ್ಟಿಯಿಂದ ಮಿನಿ-ಲಾಕ್‌ಡೌನ್ ಅವಶ್ಯಕತೆಯಾಗಿದೆ. ಸಾಂಕ್ರಾಮಿಕವನ್ನು ಎಸ್‌ಡಿಆರ್‌ಎಫ್ ಅಡಿಯಲ್ಲಿ ನೈಸರ್ಗಿಕ ವಿಪತ್ತು ಎಂದು ಘೋಷಿಸಬಹುದು. ಅದರಂತೆ ಎಲ್ಲಾ ಅಂತ್ಯೊದಯ ಅನ್ನಾ ಯೋಜನೆ (AYY) ಮತ್ತು PHH ಪಡಿತರ ಚೀಟಿ ಹೊಂದಿರುವವರಿಗೆ ಲಾಕ್‌ಡೌನ್ ಸಮಯದಲ್ಲಿ ದಿನಕ್ಕೆ ವಯಸ್ಕರಿಗೆ 100 ರೂಪಾಯಿ ಮತ್ತು ಮಕ್ಕಳಿಗೆ ದಿನಕ್ಕೆ 60 ರೂಪಾಯಿಯಂತೆ ಗ್ರಾಚ್ಯುಟೀಸ್ ರಿಲೀಫ್ ನೀಡಲು ರಾಜ್ಯಕ್ಕೆ ಅನುಮತಿ ನೀಡಬಹುದು. ಲಾಕ್‌ಡೌನ್ ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ” ಎಂದು ಉದ್ಧವ್ ಠಾಕ್ರೆ ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲೇ ಹೆಚ್ಚು ಹಾನಿಗೊಳಗಾದ ರಾಜ್ಯ ಮಹಾರಾಷ್ಟ್ರವಾಗಿದೆ.  ಬುಧವಾರ ಸುಮಾರು 60,000 ಹೊಸ ಪ್ರಕರಣಗಳು ಮತ್ತು ಕಳೆದ ವಾರದಿಂದ ದಿನಕ್ಕೆ 50,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ರೋಗಿಗಳಿಗೆ ಆಸ್ಪತ್ರೆಯಲ್ಲಿ ಹಾಸಿಗೆಗಳು, ಆಕ್ಸಿಜನ್ ಸಿಲಿಂಡರ್‌, ವೈದ್ಯಕೀಯ ಉಪಕರಣಗಳು, ಕೊರೊನಾ ಲಸಿಕೆ ಎಲ್ಲವೂ ರಾಜ್ಯಾದ್ಯಂತ ಕೊರತೆಯಿವೆ.

ಪೂರ್ಣ ಲಾಕ್‌ಡೌನ್‌ಗೆ ಆದೇಶ ನೀಡುವುದರಿಂದ ದೂರ ಸರಿದಿರುವ ಉದ್ಧವ್ ಠಾಕ್ರೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಆದರೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತು ಲಸಿಕೆಗಳು ಕಡಿಮೆ ಪೂರೈಕೆಯಾಗುತ್ತಿರುವುದರಿಂದ ಮಿನಿ ಲಾಕ್‌ಡೌನ್‌ ಹೇರಲು ಬಯಸುತ್ತಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...