Homeಮುಖಪುಟಕೊರೊನಾವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿ, SDRF ಹಣ ಬಳಸಲು ಬಿಡಿ- ಉದ್ಧವ್ ಠಾಕ್ರೆ

ಕೊರೊನಾವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿ, SDRF ಹಣ ಬಳಸಲು ಬಿಡಿ- ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಸಾಂಕ್ರಾಮಿಕ ಉಲ್ಬಣಗೊಂಡಿದ್ದು, ಕೊರೊನಾವನ್ನು “ನೈಸರ್ಗಿಕ ವಿಪತ್ತು” ಎಂದು ಘೋಷಿಸಿ, ಎಸ್‌ಡಿಆರ್‌ಎಫ್ ಹಣವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ತಮ್ಮ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಪರಿಣಾಮ ಹೆಚ್ಚು ಕೆಟ್ಟದಾಗಿದೆ. ಆರ್ಥಿಕ ಪರಿಹಾರ ನೀಡಲು ಕೊರೊನಾವನ್ನು ನೈಸರ್ಗಿಕ ವಿಪತ್ತು ಎಂದು ಘೋಷಿಸಿ, ಎಸ್‌ಡಿಆರ್‌ಎಫ್ (state disaster response fund) ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯವು ಈಗ ಆರು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಕೊರೊನಾ ರೋಗಿಗಳ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಜನರಿಗೆ ಆರ್ಥಿಕ ಸಹಾಯದ ಅವಶ್ಯಕತೆಯಿದೆ. ಜೊತೆಗೆ “ಮಿನಿ-ಲಾಕ್‌ಡೌನ್ ಅವಶ್ಯಕತೆಯಾಗಿದೆ ಈಗ ಇದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಕೊರೊನಾ ಸಾಂಕ್ರಾಮಿಕದ ದೃಷ್ಟಿಯಿಂದ ಮಿನಿ-ಲಾಕ್‌ಡೌನ್ ಅವಶ್ಯಕತೆಯಾಗಿದೆ. ಸಾಂಕ್ರಾಮಿಕವನ್ನು ಎಸ್‌ಡಿಆರ್‌ಎಫ್ ಅಡಿಯಲ್ಲಿ ನೈಸರ್ಗಿಕ ವಿಪತ್ತು ಎಂದು ಘೋಷಿಸಬಹುದು. ಅದರಂತೆ ಎಲ್ಲಾ ಅಂತ್ಯೊದಯ ಅನ್ನಾ ಯೋಜನೆ (AYY) ಮತ್ತು PHH ಪಡಿತರ ಚೀಟಿ ಹೊಂದಿರುವವರಿಗೆ ಲಾಕ್‌ಡೌನ್ ಸಮಯದಲ್ಲಿ ದಿನಕ್ಕೆ ವಯಸ್ಕರಿಗೆ 100 ರೂಪಾಯಿ ಮತ್ತು ಮಕ್ಕಳಿಗೆ ದಿನಕ್ಕೆ 60 ರೂಪಾಯಿಯಂತೆ ಗ್ರಾಚ್ಯುಟೀಸ್ ರಿಲೀಫ್ ನೀಡಲು ರಾಜ್ಯಕ್ಕೆ ಅನುಮತಿ ನೀಡಬಹುದು. ಲಾಕ್‌ಡೌನ್ ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ” ಎಂದು ಉದ್ಧವ್ ಠಾಕ್ರೆ ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲೇ ಹೆಚ್ಚು ಹಾನಿಗೊಳಗಾದ ರಾಜ್ಯ ಮಹಾರಾಷ್ಟ್ರವಾಗಿದೆ.  ಬುಧವಾರ ಸುಮಾರು 60,000 ಹೊಸ ಪ್ರಕರಣಗಳು ಮತ್ತು ಕಳೆದ ವಾರದಿಂದ ದಿನಕ್ಕೆ 50,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ರೋಗಿಗಳಿಗೆ ಆಸ್ಪತ್ರೆಯಲ್ಲಿ ಹಾಸಿಗೆಗಳು, ಆಕ್ಸಿಜನ್ ಸಿಲಿಂಡರ್‌, ವೈದ್ಯಕೀಯ ಉಪಕರಣಗಳು, ಕೊರೊನಾ ಲಸಿಕೆ ಎಲ್ಲವೂ ರಾಜ್ಯಾದ್ಯಂತ ಕೊರತೆಯಿವೆ.

ಪೂರ್ಣ ಲಾಕ್‌ಡೌನ್‌ಗೆ ಆದೇಶ ನೀಡುವುದರಿಂದ ದೂರ ಸರಿದಿರುವ ಉದ್ಧವ್ ಠಾಕ್ರೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಆದರೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತು ಲಸಿಕೆಗಳು ಕಡಿಮೆ ಪೂರೈಕೆಯಾಗುತ್ತಿರುವುದರಿಂದ ಮಿನಿ ಲಾಕ್‌ಡೌನ್‌ ಹೇರಲು ಬಯಸುತ್ತಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...