Homeಮುಖಪುಟಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

ಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

- Advertisement -
- Advertisement -

‘ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

‘ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ದಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಸಮಾವೇಶದಲ್ಲಿ ಆಶಯ ಮಾತುಗಳನ್ನಾಡಿದ ಅವರು, ‘ಈ ಸಮಾವೇಶವನ್ನು ಯಾಕೆ ಆಯೋಜನೆ ಮಾಡಿದ್ದೇವೆ ಎಂಬುದನ್ನು ನಾವೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಇಲ್ಲಿಗೆ ಬಂದಿರುವ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ, ಈ ಕಾರ್ಯಕ್ರಮ ಅರ್ಥಪೂರ್ಣ ಆಗುವುದಿಲ್ಲ’ ಎಂದು ಹೇಳಿದರು.

‘ನಮ್ಮ ಪೂರ್ವಿಕರ ಮಾತುಗಳನ್ನು ನಾವು ಸರಿಯಾಗಿ ಕೇಳಿಸಿಕೊಳ್ಳದೇ ಇದ್ದಿದ್ದಕ್ಕೆ ನಾವು ಈ ರೀತಿಯ ಶೋಷಣೆಗೆ ಒಳಗಾಗಿದ್ದೇವೆ. ನಮ್ಮ ಪೂರ್ವಿಕರು ಮಾಡಿದ ಮಹಾನ್ ಹೋರಾಟಗಳನ್ನು ಚರಿತ್ರಕಾರರು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಹು ಮಹಾರಾಜರು ಈ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಕೊಟ್ಟಾಗ, ಸಾಮಾಜಿಕ ನ್ಯಾಯವನ್ನು ಜಾರಿ ಮಾಡಿದಾಗ, ಅವರ ಉದ್ದೇಶ ತುಳಿತಕ್ಕೆ ಒಳಗಾಗಿದ್ದವರ ಪರವಾಗಿತ್ತು. ಅವರು ಶಿಕ್ಷಣ, ಉದ್ಯೋಗಗಳಲ್ಲಿ ಸಾಮಾಜಿಕ ನ್ಯಾಯ ಜಾರಿ ಮಾಡ್ತಾರೆ. ಆಗ ಒಬ್ಬರು ಸ್ವಾತಂತ್ರ್ಯ ಹೋರಾಟಗಾರರು ಪ್ರತಿಕ್ರಿಯಿಸಿ, ಶಾಹು ಮಹಾರಾಜರು ದನ ಕಾಯುವವರಿಗೆ, ಕುರಿ ಕಾಯುವವರಿಗೆ, ಬೀದಿ ಗುಡಿಸುವವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರೆಲ್ಲಾ ಶಿಕ್ಷಣ ಪಡೆದು ಸಾಧಿಸುವುದಾದರೂ ಏನು ಎಂದು ಕೇಳಿದವರು ಚರಿತ್ರೆಯಲ್ಲಿ ‘ಲೋಕಮಾನ್ಯ’ರಾದರು; ಶಾಹು ಮಹಾರಾಜರು ಚರಿತ್ರೆಯಲ್ಲಿ ಖಳನಾಯಕರಾದರು; ಅದಕ್ಕೆಲ್ಲಾ ಕಾರಣ ನಾವು ನೀವು’ ಎಂದು ಹೇಳಿದರು.

‘ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕೊಟ್ಟಾಗ ಇದೇ ಜನ ನಾಲ್ವಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಹು ಮಹಾರಾಜರು, ತಂದೆ ಪೆರಿಯಾರ್, ಜ್ಯೋತಿ ಬಾಪುಲೆ, ನಾರಾಯಣಗುರು ಅವರ ವಿಚಾರಗಳನ್ನು ಓದಿ ಬೆಳೆದವರು ಅಂಬೇಡ್ಕರ್; ನಾವೆಲ್ಲಾ ಅವರ ಕುಡಿಗಳು. ಬಹುಸಂಖ್ಯಾತ ತಳಸಮುದಾಯಗಳು ರಾಜ್ಯಾಧಿಕಾರ ಹಿಡಿಯಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ನಮಗೆ ಅಧಿಕಾರ ಸಿಕ್ಕಿದೆಯಾ? ನಮ್ಮಲ್ಲಿರುವ ಜಾತಿ ವೈಶಮ್ಯದಿಂದ ಸಾಧ್ಯವಾಗಿಲ್ಲ. ವೈದಿಕ ಧರ್ಮ ನಮ್ಮ ವಿರುದ್ಧ ನಮ್ಮನ್ನೇ ಎತ್ತಿಕಟ್ಟಿ ಆಟವಾಡುತ್ತಿದೆ’ ಎಂದರು.

‘ದೇಶದಲ್ಲಿ ಇಂದು ಮನುವಾದ ಮತ್ತು ಅಂಬೇಡ್ಕರ್ ವಾದ ಇದೆ. ಮನುವಾದ ದೇಶದ ಬಹುಜನರನ್ನು ಒಡೆಯುತ್ತಾ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಅಂಬೇಡ್ಕರ್ ವಾದ ದೇಶದ ಬಹುಸಂಖ್ಯಾತರಿಗೆ ರಾಜಕೀಯ ಅಧಿಕಾರವನ್ನು ನೀಡುತ್ತಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕೊಡುವಾಗ ಇದೇ ಸಂಘಪರಿವಾರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ನಾವು ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ. ಇನ್ನು ಮುಂದೆ ಅವರ ವಿರುದ್ಧ ಹಗುರವಾಗಿ ಮಾತನಾಡಿದರೆ ನಿಮ್ಮ ಬಾಯಿಗೆ ಬೀಗ ಹಾಕಬೇಕುತ್ತದೆ. ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆಗೆ ತಲೆಯಲ್ಲಿ ಮಿದುಳು ಇದೆಯಾ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಜನನಾಯಕ ಎಂದು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಶೋಷಿತ ಸಮುದಾಯಗಳ ಪರವಾದ ನಾಯಕರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳೆ ನೀವು ಯಾವುದೇ ಕಾರಣಕ್ಕೂ ಅಂಜಿಕೊಳ್ಳಬೇಡಿ; ನಿಮ್ಮ ಜತೆ ಇಡೀ ರಾಜ್ಯದ ಸಮಸ್ತ ಶೋಷಿತ ಸಮುದಾಯ ಇದೆ’ ಎಂದು ವೇದಿಕೆಯಲ್ಲೆ ಹೇಳಿದರು.

‘ಕಾಂತರಾಜು ಆಯೋಗದ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಇಲ್ಲ. ಅದು ಬಹಿರಂಗವಾಗಿ, ಸತ್ಯ ಏನಿದೆ ಎಂಬುದು ಗೊತ್ತಾಗಬೇಕು. ತಾಯಿಯ ಗರ್ಭದಲ್ಲೆ ಮಗುವನ್ನು ಕೊಲ್ಲುವ ಪ್ರಯತ್ನವನ್ನು ಈ ರಾಜ್ಯದ ಮೇಲ್ಜಾತಿಗಳು ಮಾಡಿದರೆ, ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಬಸವಣ್ಣನವರನ್ನು ಸಾಂಸ್ಕೃತಿ ನಾಯಕ ಎಂದು ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ; ಅವರಿಗೆ ಧನ್ಯವಾದಗಳು. ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳ ಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ಮಾವಳ್ಳಿ ಶಂಕರ್ ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಟ್ಟರು.

ಇದನ್ನೂ ಓದಿ; ಹಿಂದುಳಿದವರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....