Homeಮುಖಪುಟಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

ಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

- Advertisement -
- Advertisement -

‘ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

‘ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ದಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಸಮಾವೇಶದಲ್ಲಿ ಆಶಯ ಮಾತುಗಳನ್ನಾಡಿದ ಅವರು, ‘ಈ ಸಮಾವೇಶವನ್ನು ಯಾಕೆ ಆಯೋಜನೆ ಮಾಡಿದ್ದೇವೆ ಎಂಬುದನ್ನು ನಾವೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಇಲ್ಲಿಗೆ ಬಂದಿರುವ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ, ಈ ಕಾರ್ಯಕ್ರಮ ಅರ್ಥಪೂರ್ಣ ಆಗುವುದಿಲ್ಲ’ ಎಂದು ಹೇಳಿದರು.

‘ನಮ್ಮ ಪೂರ್ವಿಕರ ಮಾತುಗಳನ್ನು ನಾವು ಸರಿಯಾಗಿ ಕೇಳಿಸಿಕೊಳ್ಳದೇ ಇದ್ದಿದ್ದಕ್ಕೆ ನಾವು ಈ ರೀತಿಯ ಶೋಷಣೆಗೆ ಒಳಗಾಗಿದ್ದೇವೆ. ನಮ್ಮ ಪೂರ್ವಿಕರು ಮಾಡಿದ ಮಹಾನ್ ಹೋರಾಟಗಳನ್ನು ಚರಿತ್ರಕಾರರು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಹು ಮಹಾರಾಜರು ಈ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಕೊಟ್ಟಾಗ, ಸಾಮಾಜಿಕ ನ್ಯಾಯವನ್ನು ಜಾರಿ ಮಾಡಿದಾಗ, ಅವರ ಉದ್ದೇಶ ತುಳಿತಕ್ಕೆ ಒಳಗಾಗಿದ್ದವರ ಪರವಾಗಿತ್ತು. ಅವರು ಶಿಕ್ಷಣ, ಉದ್ಯೋಗಗಳಲ್ಲಿ ಸಾಮಾಜಿಕ ನ್ಯಾಯ ಜಾರಿ ಮಾಡ್ತಾರೆ. ಆಗ ಒಬ್ಬರು ಸ್ವಾತಂತ್ರ್ಯ ಹೋರಾಟಗಾರರು ಪ್ರತಿಕ್ರಿಯಿಸಿ, ಶಾಹು ಮಹಾರಾಜರು ದನ ಕಾಯುವವರಿಗೆ, ಕುರಿ ಕಾಯುವವರಿಗೆ, ಬೀದಿ ಗುಡಿಸುವವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರೆಲ್ಲಾ ಶಿಕ್ಷಣ ಪಡೆದು ಸಾಧಿಸುವುದಾದರೂ ಏನು ಎಂದು ಕೇಳಿದವರು ಚರಿತ್ರೆಯಲ್ಲಿ ‘ಲೋಕಮಾನ್ಯ’ರಾದರು; ಶಾಹು ಮಹಾರಾಜರು ಚರಿತ್ರೆಯಲ್ಲಿ ಖಳನಾಯಕರಾದರು; ಅದಕ್ಕೆಲ್ಲಾ ಕಾರಣ ನಾವು ನೀವು’ ಎಂದು ಹೇಳಿದರು.

‘ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕೊಟ್ಟಾಗ ಇದೇ ಜನ ನಾಲ್ವಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಹು ಮಹಾರಾಜರು, ತಂದೆ ಪೆರಿಯಾರ್, ಜ್ಯೋತಿ ಬಾಪುಲೆ, ನಾರಾಯಣಗುರು ಅವರ ವಿಚಾರಗಳನ್ನು ಓದಿ ಬೆಳೆದವರು ಅಂಬೇಡ್ಕರ್; ನಾವೆಲ್ಲಾ ಅವರ ಕುಡಿಗಳು. ಬಹುಸಂಖ್ಯಾತ ತಳಸಮುದಾಯಗಳು ರಾಜ್ಯಾಧಿಕಾರ ಹಿಡಿಯಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ನಮಗೆ ಅಧಿಕಾರ ಸಿಕ್ಕಿದೆಯಾ? ನಮ್ಮಲ್ಲಿರುವ ಜಾತಿ ವೈಶಮ್ಯದಿಂದ ಸಾಧ್ಯವಾಗಿಲ್ಲ. ವೈದಿಕ ಧರ್ಮ ನಮ್ಮ ವಿರುದ್ಧ ನಮ್ಮನ್ನೇ ಎತ್ತಿಕಟ್ಟಿ ಆಟವಾಡುತ್ತಿದೆ’ ಎಂದರು.

‘ದೇಶದಲ್ಲಿ ಇಂದು ಮನುವಾದ ಮತ್ತು ಅಂಬೇಡ್ಕರ್ ವಾದ ಇದೆ. ಮನುವಾದ ದೇಶದ ಬಹುಜನರನ್ನು ಒಡೆಯುತ್ತಾ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಅಂಬೇಡ್ಕರ್ ವಾದ ದೇಶದ ಬಹುಸಂಖ್ಯಾತರಿಗೆ ರಾಜಕೀಯ ಅಧಿಕಾರವನ್ನು ನೀಡುತ್ತಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕೊಡುವಾಗ ಇದೇ ಸಂಘಪರಿವಾರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ನಾವು ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ. ಇನ್ನು ಮುಂದೆ ಅವರ ವಿರುದ್ಧ ಹಗುರವಾಗಿ ಮಾತನಾಡಿದರೆ ನಿಮ್ಮ ಬಾಯಿಗೆ ಬೀಗ ಹಾಕಬೇಕುತ್ತದೆ. ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆಗೆ ತಲೆಯಲ್ಲಿ ಮಿದುಳು ಇದೆಯಾ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಜನನಾಯಕ ಎಂದು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಶೋಷಿತ ಸಮುದಾಯಗಳ ಪರವಾದ ನಾಯಕರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳೆ ನೀವು ಯಾವುದೇ ಕಾರಣಕ್ಕೂ ಅಂಜಿಕೊಳ್ಳಬೇಡಿ; ನಿಮ್ಮ ಜತೆ ಇಡೀ ರಾಜ್ಯದ ಸಮಸ್ತ ಶೋಷಿತ ಸಮುದಾಯ ಇದೆ’ ಎಂದು ವೇದಿಕೆಯಲ್ಲೆ ಹೇಳಿದರು.

‘ಕಾಂತರಾಜು ಆಯೋಗದ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಇಲ್ಲ. ಅದು ಬಹಿರಂಗವಾಗಿ, ಸತ್ಯ ಏನಿದೆ ಎಂಬುದು ಗೊತ್ತಾಗಬೇಕು. ತಾಯಿಯ ಗರ್ಭದಲ್ಲೆ ಮಗುವನ್ನು ಕೊಲ್ಲುವ ಪ್ರಯತ್ನವನ್ನು ಈ ರಾಜ್ಯದ ಮೇಲ್ಜಾತಿಗಳು ಮಾಡಿದರೆ, ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಬಸವಣ್ಣನವರನ್ನು ಸಾಂಸ್ಕೃತಿ ನಾಯಕ ಎಂದು ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ; ಅವರಿಗೆ ಧನ್ಯವಾದಗಳು. ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳ ಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ಮಾವಳ್ಳಿ ಶಂಕರ್ ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಟ್ಟರು.

ಇದನ್ನೂ ಓದಿ; ಹಿಂದುಳಿದವರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...