Homeಮುಖಪುಟಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

ಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

- Advertisement -
- Advertisement -

‘ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

‘ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ದಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಸಮಾವೇಶದಲ್ಲಿ ಆಶಯ ಮಾತುಗಳನ್ನಾಡಿದ ಅವರು, ‘ಈ ಸಮಾವೇಶವನ್ನು ಯಾಕೆ ಆಯೋಜನೆ ಮಾಡಿದ್ದೇವೆ ಎಂಬುದನ್ನು ನಾವೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಇಲ್ಲಿಗೆ ಬಂದಿರುವ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ, ಈ ಕಾರ್ಯಕ್ರಮ ಅರ್ಥಪೂರ್ಣ ಆಗುವುದಿಲ್ಲ’ ಎಂದು ಹೇಳಿದರು.

‘ನಮ್ಮ ಪೂರ್ವಿಕರ ಮಾತುಗಳನ್ನು ನಾವು ಸರಿಯಾಗಿ ಕೇಳಿಸಿಕೊಳ್ಳದೇ ಇದ್ದಿದ್ದಕ್ಕೆ ನಾವು ಈ ರೀತಿಯ ಶೋಷಣೆಗೆ ಒಳಗಾಗಿದ್ದೇವೆ. ನಮ್ಮ ಪೂರ್ವಿಕರು ಮಾಡಿದ ಮಹಾನ್ ಹೋರಾಟಗಳನ್ನು ಚರಿತ್ರಕಾರರು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಹು ಮಹಾರಾಜರು ಈ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಕೊಟ್ಟಾಗ, ಸಾಮಾಜಿಕ ನ್ಯಾಯವನ್ನು ಜಾರಿ ಮಾಡಿದಾಗ, ಅವರ ಉದ್ದೇಶ ತುಳಿತಕ್ಕೆ ಒಳಗಾಗಿದ್ದವರ ಪರವಾಗಿತ್ತು. ಅವರು ಶಿಕ್ಷಣ, ಉದ್ಯೋಗಗಳಲ್ಲಿ ಸಾಮಾಜಿಕ ನ್ಯಾಯ ಜಾರಿ ಮಾಡ್ತಾರೆ. ಆಗ ಒಬ್ಬರು ಸ್ವಾತಂತ್ರ್ಯ ಹೋರಾಟಗಾರರು ಪ್ರತಿಕ್ರಿಯಿಸಿ, ಶಾಹು ಮಹಾರಾಜರು ದನ ಕಾಯುವವರಿಗೆ, ಕುರಿ ಕಾಯುವವರಿಗೆ, ಬೀದಿ ಗುಡಿಸುವವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರೆಲ್ಲಾ ಶಿಕ್ಷಣ ಪಡೆದು ಸಾಧಿಸುವುದಾದರೂ ಏನು ಎಂದು ಕೇಳಿದವರು ಚರಿತ್ರೆಯಲ್ಲಿ ‘ಲೋಕಮಾನ್ಯ’ರಾದರು; ಶಾಹು ಮಹಾರಾಜರು ಚರಿತ್ರೆಯಲ್ಲಿ ಖಳನಾಯಕರಾದರು; ಅದಕ್ಕೆಲ್ಲಾ ಕಾರಣ ನಾವು ನೀವು’ ಎಂದು ಹೇಳಿದರು.

‘ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕೊಟ್ಟಾಗ ಇದೇ ಜನ ನಾಲ್ವಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಹು ಮಹಾರಾಜರು, ತಂದೆ ಪೆರಿಯಾರ್, ಜ್ಯೋತಿ ಬಾಪುಲೆ, ನಾರಾಯಣಗುರು ಅವರ ವಿಚಾರಗಳನ್ನು ಓದಿ ಬೆಳೆದವರು ಅಂಬೇಡ್ಕರ್; ನಾವೆಲ್ಲಾ ಅವರ ಕುಡಿಗಳು. ಬಹುಸಂಖ್ಯಾತ ತಳಸಮುದಾಯಗಳು ರಾಜ್ಯಾಧಿಕಾರ ಹಿಡಿಯಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ನಮಗೆ ಅಧಿಕಾರ ಸಿಕ್ಕಿದೆಯಾ? ನಮ್ಮಲ್ಲಿರುವ ಜಾತಿ ವೈಶಮ್ಯದಿಂದ ಸಾಧ್ಯವಾಗಿಲ್ಲ. ವೈದಿಕ ಧರ್ಮ ನಮ್ಮ ವಿರುದ್ಧ ನಮ್ಮನ್ನೇ ಎತ್ತಿಕಟ್ಟಿ ಆಟವಾಡುತ್ತಿದೆ’ ಎಂದರು.

‘ದೇಶದಲ್ಲಿ ಇಂದು ಮನುವಾದ ಮತ್ತು ಅಂಬೇಡ್ಕರ್ ವಾದ ಇದೆ. ಮನುವಾದ ದೇಶದ ಬಹುಜನರನ್ನು ಒಡೆಯುತ್ತಾ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಅಂಬೇಡ್ಕರ್ ವಾದ ದೇಶದ ಬಹುಸಂಖ್ಯಾತರಿಗೆ ರಾಜಕೀಯ ಅಧಿಕಾರವನ್ನು ನೀಡುತ್ತಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕೊಡುವಾಗ ಇದೇ ಸಂಘಪರಿವಾರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ನಾವು ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ. ಇನ್ನು ಮುಂದೆ ಅವರ ವಿರುದ್ಧ ಹಗುರವಾಗಿ ಮಾತನಾಡಿದರೆ ನಿಮ್ಮ ಬಾಯಿಗೆ ಬೀಗ ಹಾಕಬೇಕುತ್ತದೆ. ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆಗೆ ತಲೆಯಲ್ಲಿ ಮಿದುಳು ಇದೆಯಾ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಜನನಾಯಕ ಎಂದು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಶೋಷಿತ ಸಮುದಾಯಗಳ ಪರವಾದ ನಾಯಕರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳೆ ನೀವು ಯಾವುದೇ ಕಾರಣಕ್ಕೂ ಅಂಜಿಕೊಳ್ಳಬೇಡಿ; ನಿಮ್ಮ ಜತೆ ಇಡೀ ರಾಜ್ಯದ ಸಮಸ್ತ ಶೋಷಿತ ಸಮುದಾಯ ಇದೆ’ ಎಂದು ವೇದಿಕೆಯಲ್ಲೆ ಹೇಳಿದರು.

‘ಕಾಂತರಾಜು ಆಯೋಗದ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಇಲ್ಲ. ಅದು ಬಹಿರಂಗವಾಗಿ, ಸತ್ಯ ಏನಿದೆ ಎಂಬುದು ಗೊತ್ತಾಗಬೇಕು. ತಾಯಿಯ ಗರ್ಭದಲ್ಲೆ ಮಗುವನ್ನು ಕೊಲ್ಲುವ ಪ್ರಯತ್ನವನ್ನು ಈ ರಾಜ್ಯದ ಮೇಲ್ಜಾತಿಗಳು ಮಾಡಿದರೆ, ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಬಸವಣ್ಣನವರನ್ನು ಸಾಂಸ್ಕೃತಿ ನಾಯಕ ಎಂದು ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ; ಅವರಿಗೆ ಧನ್ಯವಾದಗಳು. ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳ ಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ಮಾವಳ್ಳಿ ಶಂಕರ್ ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಟ್ಟರು.

ಇದನ್ನೂ ಓದಿ; ಹಿಂದುಳಿದವರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...