Homeಮುಖಪುಟಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

ಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

- Advertisement -
- Advertisement -

‘ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

‘ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ದಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಸಮಾವೇಶದಲ್ಲಿ ಆಶಯ ಮಾತುಗಳನ್ನಾಡಿದ ಅವರು, ‘ಈ ಸಮಾವೇಶವನ್ನು ಯಾಕೆ ಆಯೋಜನೆ ಮಾಡಿದ್ದೇವೆ ಎಂಬುದನ್ನು ನಾವೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಇಲ್ಲಿಗೆ ಬಂದಿರುವ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ, ಈ ಕಾರ್ಯಕ್ರಮ ಅರ್ಥಪೂರ್ಣ ಆಗುವುದಿಲ್ಲ’ ಎಂದು ಹೇಳಿದರು.

‘ನಮ್ಮ ಪೂರ್ವಿಕರ ಮಾತುಗಳನ್ನು ನಾವು ಸರಿಯಾಗಿ ಕೇಳಿಸಿಕೊಳ್ಳದೇ ಇದ್ದಿದ್ದಕ್ಕೆ ನಾವು ಈ ರೀತಿಯ ಶೋಷಣೆಗೆ ಒಳಗಾಗಿದ್ದೇವೆ. ನಮ್ಮ ಪೂರ್ವಿಕರು ಮಾಡಿದ ಮಹಾನ್ ಹೋರಾಟಗಳನ್ನು ಚರಿತ್ರಕಾರರು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಹು ಮಹಾರಾಜರು ಈ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಕೊಟ್ಟಾಗ, ಸಾಮಾಜಿಕ ನ್ಯಾಯವನ್ನು ಜಾರಿ ಮಾಡಿದಾಗ, ಅವರ ಉದ್ದೇಶ ತುಳಿತಕ್ಕೆ ಒಳಗಾಗಿದ್ದವರ ಪರವಾಗಿತ್ತು. ಅವರು ಶಿಕ್ಷಣ, ಉದ್ಯೋಗಗಳಲ್ಲಿ ಸಾಮಾಜಿಕ ನ್ಯಾಯ ಜಾರಿ ಮಾಡ್ತಾರೆ. ಆಗ ಒಬ್ಬರು ಸ್ವಾತಂತ್ರ್ಯ ಹೋರಾಟಗಾರರು ಪ್ರತಿಕ್ರಿಯಿಸಿ, ಶಾಹು ಮಹಾರಾಜರು ದನ ಕಾಯುವವರಿಗೆ, ಕುರಿ ಕಾಯುವವರಿಗೆ, ಬೀದಿ ಗುಡಿಸುವವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರೆಲ್ಲಾ ಶಿಕ್ಷಣ ಪಡೆದು ಸಾಧಿಸುವುದಾದರೂ ಏನು ಎಂದು ಕೇಳಿದವರು ಚರಿತ್ರೆಯಲ್ಲಿ ‘ಲೋಕಮಾನ್ಯ’ರಾದರು; ಶಾಹು ಮಹಾರಾಜರು ಚರಿತ್ರೆಯಲ್ಲಿ ಖಳನಾಯಕರಾದರು; ಅದಕ್ಕೆಲ್ಲಾ ಕಾರಣ ನಾವು ನೀವು’ ಎಂದು ಹೇಳಿದರು.

‘ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕೊಟ್ಟಾಗ ಇದೇ ಜನ ನಾಲ್ವಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಹು ಮಹಾರಾಜರು, ತಂದೆ ಪೆರಿಯಾರ್, ಜ್ಯೋತಿ ಬಾಪುಲೆ, ನಾರಾಯಣಗುರು ಅವರ ವಿಚಾರಗಳನ್ನು ಓದಿ ಬೆಳೆದವರು ಅಂಬೇಡ್ಕರ್; ನಾವೆಲ್ಲಾ ಅವರ ಕುಡಿಗಳು. ಬಹುಸಂಖ್ಯಾತ ತಳಸಮುದಾಯಗಳು ರಾಜ್ಯಾಧಿಕಾರ ಹಿಡಿಯಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ನಮಗೆ ಅಧಿಕಾರ ಸಿಕ್ಕಿದೆಯಾ? ನಮ್ಮಲ್ಲಿರುವ ಜಾತಿ ವೈಶಮ್ಯದಿಂದ ಸಾಧ್ಯವಾಗಿಲ್ಲ. ವೈದಿಕ ಧರ್ಮ ನಮ್ಮ ವಿರುದ್ಧ ನಮ್ಮನ್ನೇ ಎತ್ತಿಕಟ್ಟಿ ಆಟವಾಡುತ್ತಿದೆ’ ಎಂದರು.

‘ದೇಶದಲ್ಲಿ ಇಂದು ಮನುವಾದ ಮತ್ತು ಅಂಬೇಡ್ಕರ್ ವಾದ ಇದೆ. ಮನುವಾದ ದೇಶದ ಬಹುಜನರನ್ನು ಒಡೆಯುತ್ತಾ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಅಂಬೇಡ್ಕರ್ ವಾದ ದೇಶದ ಬಹುಸಂಖ್ಯಾತರಿಗೆ ರಾಜಕೀಯ ಅಧಿಕಾರವನ್ನು ನೀಡುತ್ತಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕೊಡುವಾಗ ಇದೇ ಸಂಘಪರಿವಾರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ನಾವು ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ. ಇನ್ನು ಮುಂದೆ ಅವರ ವಿರುದ್ಧ ಹಗುರವಾಗಿ ಮಾತನಾಡಿದರೆ ನಿಮ್ಮ ಬಾಯಿಗೆ ಬೀಗ ಹಾಕಬೇಕುತ್ತದೆ. ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆಗೆ ತಲೆಯಲ್ಲಿ ಮಿದುಳು ಇದೆಯಾ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಜನನಾಯಕ ಎಂದು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಶೋಷಿತ ಸಮುದಾಯಗಳ ಪರವಾದ ನಾಯಕರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳೆ ನೀವು ಯಾವುದೇ ಕಾರಣಕ್ಕೂ ಅಂಜಿಕೊಳ್ಳಬೇಡಿ; ನಿಮ್ಮ ಜತೆ ಇಡೀ ರಾಜ್ಯದ ಸಮಸ್ತ ಶೋಷಿತ ಸಮುದಾಯ ಇದೆ’ ಎಂದು ವೇದಿಕೆಯಲ್ಲೆ ಹೇಳಿದರು.

‘ಕಾಂತರಾಜು ಆಯೋಗದ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಇಲ್ಲ. ಅದು ಬಹಿರಂಗವಾಗಿ, ಸತ್ಯ ಏನಿದೆ ಎಂಬುದು ಗೊತ್ತಾಗಬೇಕು. ತಾಯಿಯ ಗರ್ಭದಲ್ಲೆ ಮಗುವನ್ನು ಕೊಲ್ಲುವ ಪ್ರಯತ್ನವನ್ನು ಈ ರಾಜ್ಯದ ಮೇಲ್ಜಾತಿಗಳು ಮಾಡಿದರೆ, ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಬಸವಣ್ಣನವರನ್ನು ಸಾಂಸ್ಕೃತಿ ನಾಯಕ ಎಂದು ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ; ಅವರಿಗೆ ಧನ್ಯವಾದಗಳು. ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳ ಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ಮಾವಳ್ಳಿ ಶಂಕರ್ ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಟ್ಟರು.

ಇದನ್ನೂ ಓದಿ; ಹಿಂದುಳಿದವರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...