Homeಮುಖಪುಟಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

ಬಸವಲಿಂಗಪ್ಪ-ಪ್ರೊ. ಬಿ. ಕೃಷ್ಣಪ್ಪ ಅವರನ್ನು ‘ಕರ್ನಾಟಕ ರತ್ನ’ ಎಂದು ಘೋಷಿಸಿ: ಮಾವಳ್ಳಿ ಶಂಕರ್

- Advertisement -
- Advertisement -

‘ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

‘ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ದಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತ ಸಮುದಾಯಗಳ ರಾಜ್ಯ ಮಟ್ಟದ ಜಾಗೃತಿ ಸಮಾವೇಶದಲ್ಲಿ ಆಶಯ ಮಾತುಗಳನ್ನಾಡಿದ ಅವರು, ‘ಈ ಸಮಾವೇಶವನ್ನು ಯಾಕೆ ಆಯೋಜನೆ ಮಾಡಿದ್ದೇವೆ ಎಂಬುದನ್ನು ನಾವೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಇಲ್ಲಿಗೆ ಬಂದಿರುವ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ, ಈ ಕಾರ್ಯಕ್ರಮ ಅರ್ಥಪೂರ್ಣ ಆಗುವುದಿಲ್ಲ’ ಎಂದು ಹೇಳಿದರು.

‘ನಮ್ಮ ಪೂರ್ವಿಕರ ಮಾತುಗಳನ್ನು ನಾವು ಸರಿಯಾಗಿ ಕೇಳಿಸಿಕೊಳ್ಳದೇ ಇದ್ದಿದ್ದಕ್ಕೆ ನಾವು ಈ ರೀತಿಯ ಶೋಷಣೆಗೆ ಒಳಗಾಗಿದ್ದೇವೆ. ನಮ್ಮ ಪೂರ್ವಿಕರು ಮಾಡಿದ ಮಹಾನ್ ಹೋರಾಟಗಳನ್ನು ಚರಿತ್ರಕಾರರು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಹು ಮಹಾರಾಜರು ಈ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಕೊಟ್ಟಾಗ, ಸಾಮಾಜಿಕ ನ್ಯಾಯವನ್ನು ಜಾರಿ ಮಾಡಿದಾಗ, ಅವರ ಉದ್ದೇಶ ತುಳಿತಕ್ಕೆ ಒಳಗಾಗಿದ್ದವರ ಪರವಾಗಿತ್ತು. ಅವರು ಶಿಕ್ಷಣ, ಉದ್ಯೋಗಗಳಲ್ಲಿ ಸಾಮಾಜಿಕ ನ್ಯಾಯ ಜಾರಿ ಮಾಡ್ತಾರೆ. ಆಗ ಒಬ್ಬರು ಸ್ವಾತಂತ್ರ್ಯ ಹೋರಾಟಗಾರರು ಪ್ರತಿಕ್ರಿಯಿಸಿ, ಶಾಹು ಮಹಾರಾಜರು ದನ ಕಾಯುವವರಿಗೆ, ಕುರಿ ಕಾಯುವವರಿಗೆ, ಬೀದಿ ಗುಡಿಸುವವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಇವರೆಲ್ಲಾ ಶಿಕ್ಷಣ ಪಡೆದು ಸಾಧಿಸುವುದಾದರೂ ಏನು ಎಂದು ಕೇಳಿದವರು ಚರಿತ್ರೆಯಲ್ಲಿ ‘ಲೋಕಮಾನ್ಯ’ರಾದರು; ಶಾಹು ಮಹಾರಾಜರು ಚರಿತ್ರೆಯಲ್ಲಿ ಖಳನಾಯಕರಾದರು; ಅದಕ್ಕೆಲ್ಲಾ ಕಾರಣ ನಾವು ನೀವು’ ಎಂದು ಹೇಳಿದರು.

‘ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೀಸಲಾತಿ ಕೊಟ್ಟಾಗ ಇದೇ ಜನ ನಾಲ್ವಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಹು ಮಹಾರಾಜರು, ತಂದೆ ಪೆರಿಯಾರ್, ಜ್ಯೋತಿ ಬಾಪುಲೆ, ನಾರಾಯಣಗುರು ಅವರ ವಿಚಾರಗಳನ್ನು ಓದಿ ಬೆಳೆದವರು ಅಂಬೇಡ್ಕರ್; ನಾವೆಲ್ಲಾ ಅವರ ಕುಡಿಗಳು. ಬಹುಸಂಖ್ಯಾತ ತಳಸಮುದಾಯಗಳು ರಾಜ್ಯಾಧಿಕಾರ ಹಿಡಿಯಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ನಮಗೆ ಅಧಿಕಾರ ಸಿಕ್ಕಿದೆಯಾ? ನಮ್ಮಲ್ಲಿರುವ ಜಾತಿ ವೈಶಮ್ಯದಿಂದ ಸಾಧ್ಯವಾಗಿಲ್ಲ. ವೈದಿಕ ಧರ್ಮ ನಮ್ಮ ವಿರುದ್ಧ ನಮ್ಮನ್ನೇ ಎತ್ತಿಕಟ್ಟಿ ಆಟವಾಡುತ್ತಿದೆ’ ಎಂದರು.

‘ದೇಶದಲ್ಲಿ ಇಂದು ಮನುವಾದ ಮತ್ತು ಅಂಬೇಡ್ಕರ್ ವಾದ ಇದೆ. ಮನುವಾದ ದೇಶದ ಬಹುಜನರನ್ನು ಒಡೆಯುತ್ತಾ, ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಅಂಬೇಡ್ಕರ್ ವಾದ ದೇಶದ ಬಹುಸಂಖ್ಯಾತರಿಗೆ ರಾಜಕೀಯ ಅಧಿಕಾರವನ್ನು ನೀಡುತ್ತಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಕೊಡುವಾಗ ಇದೇ ಸಂಘಪರಿವಾರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ನಾವು ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ. ಇನ್ನು ಮುಂದೆ ಅವರ ವಿರುದ್ಧ ಹಗುರವಾಗಿ ಮಾತನಾಡಿದರೆ ನಿಮ್ಮ ಬಾಯಿಗೆ ಬೀಗ ಹಾಕಬೇಕುತ್ತದೆ. ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆಗೆ ತಲೆಯಲ್ಲಿ ಮಿದುಳು ಇದೆಯಾ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಜನನಾಯಕ ಎಂದು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಶೋಷಿತ ಸಮುದಾಯಗಳ ಪರವಾದ ನಾಯಕರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳೆ ನೀವು ಯಾವುದೇ ಕಾರಣಕ್ಕೂ ಅಂಜಿಕೊಳ್ಳಬೇಡಿ; ನಿಮ್ಮ ಜತೆ ಇಡೀ ರಾಜ್ಯದ ಸಮಸ್ತ ಶೋಷಿತ ಸಮುದಾಯ ಇದೆ’ ಎಂದು ವೇದಿಕೆಯಲ್ಲೆ ಹೇಳಿದರು.

‘ಕಾಂತರಾಜು ಆಯೋಗದ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಇಲ್ಲ. ಅದು ಬಹಿರಂಗವಾಗಿ, ಸತ್ಯ ಏನಿದೆ ಎಂಬುದು ಗೊತ್ತಾಗಬೇಕು. ತಾಯಿಯ ಗರ್ಭದಲ್ಲೆ ಮಗುವನ್ನು ಕೊಲ್ಲುವ ಪ್ರಯತ್ನವನ್ನು ಈ ರಾಜ್ಯದ ಮೇಲ್ಜಾತಿಗಳು ಮಾಡಿದರೆ, ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಬಸವಣ್ಣನವರನ್ನು ಸಾಂಸ್ಕೃತಿ ನಾಯಕ ಎಂದು ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ; ಅವರಿಗೆ ಧನ್ಯವಾದಗಳು. ಬಿ. ಬಸವಲಿಂಗಪ್ಪ ಮತ್ತು ಪ್ರೊ. ಬಿ. ಕೃಷ್ಣಪ್ಪ ಅವರು ಈ ರಾಜ್ಯದ ತಳ ಸಮದಾಯಗಳ ಎರಡು ಪ್ರಮುಖ ಶಕ್ತಿಗಳು. ಇಬ್ಬರನ್ನೂ ‘ಕರ್ನಾಟಕ ರತ್ನ’ ಎಂದು ಘೋಷಣೆ ಮಾಡಬೇಕು’ ಎಂದು ಮಾವಳ್ಳಿ ಶಂಕರ್ ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಟ್ಟರು.

ಇದನ್ನೂ ಓದಿ; ಹಿಂದುಳಿದವರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...