Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....