Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...