Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...