Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...