Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...