Homeಮುಖಪುಟಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ...

ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ

- Advertisement -
- Advertisement -

ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಚಂದ್ರನನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಚಂದ್ರಯಾನ -3ರ ಲ್ಯಾಂಡಿಂಗ್ ಸ್ಪಾಟ್‌ನ್ನು ಅದರ ರಾಜಧಾನಿಯನ್ನಾಗಿ  ಮಾಡುವಂತೆ  ಕರೆ ನೀಡಿ  ಎಂದು ಸರಕಾರದ ಮುಂದೆ ವಿಚಿತ್ರವಾದ ಬೇಡಿಕೆ ಮುಂದಿಟ್ಟಿದ್ದಾರೆ.

ಇತರ ಧರ್ಮಗಳಿಗಿಂತ ಮೊದಲು ಭಾರತ ಸರ್ಕಾರವು ಚಂದ್ರನ ಮೇಲೆ ತನ್ನ ಮಾಲೀಕತ್ವವನ್ನು ಪ್ರತಿಪಾದಿಸಬೇಕು ಮತ್ತು ಅದಕ್ಕಾಗಿ ಸಂಸತ್ತಿನಲ್ಲಿ ನಿರ್ಣಯವನ್ನು  ಅಂಗೀಕರಿಸಬೇಕೆಂದು  ತನ್ನ ಮಾತುಗಳಿಂದಲೇ ವಿವಾದಕ್ಕೆ ಹೆಸರಾಗಿರುವ ಚಕ್ರಪಾಣಿ ಮಹಾರಾಜ್ ಹೇಳಿದ್ದಾರೆ.

ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತು ಘೋಷಿಸಬೇಕು. ಚಂದ್ರಯಾನ 3 ಇಳಿಯುವ ಸ್ಥಳವನ್ನು ಅದರ ರಾಜಧಾನಿ ‘ಶಿವಶಕ್ತಿ ಪಾಯಿಂಟ್’ ಆಗಿ ಅಭಿವೃದ್ಧಿಪಡಿಸಬೇಕು. ಆದ್ದರಿಂದ ಜಿಹಾದಿ ಮನಸ್ಥಿತಿಯ ಯಾವುದೇ ಭಯೋತ್ಪಾದಕ ಅಲ್ಲಿಗೆ ತಲುಪಬಾರದು ಎಂದು ಚಕ್ರಪಾಣಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ .

ಚಂದ್ರನ ದಕ್ಷಿಣ ಧ್ರುವದ ಬಳಿ ಐತಿಹಾಸಿಕ ಚಂದ್ರಯಾನ-3  ಲ್ಯಾಂಡರ್ ಸ್ಪರ್ಶಿಸಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯಲಾಗುವುದು ಎಂದು  ಪ್ರಧಾನಿ ಈ ಮೊದಲು ಘೋಷಿಸಿದ್ದರು.

ಚಕ್ರಪಾಣಿ ಅವರು ಈ ಹಿಂದೆ ಕರೋನವೈರಸ್ ಸಾಂಕ್ರಾಮಿಕ ಸಮಯದಲ್ಲಿ ದೆಹಲಿಯಲ್ಲಿ ‘ಗೋಮುತ್ರ ಪಾರ್ಟಿ’ ನಡೆಸಿ ಗಮನ ಸೆಳೆದಿದ್ದರು. ಪಾರ್ಟಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಸದಸ್ಯರು ಕೋವಿಡ್ -19ನ್ನು ನಿವಾರಿಸುವುದಾಗಿ ಹೇಳಿ ಗೋಮೂತ್ರವನ್ನು ಸೇವಿಸಿದ್ದರು.

2018ರ ಕೇರಳ ಪ್ರವಾಹದ ಸಂದರ್ಭದಲ್ಲಿ ಚಕ್ರಪಾಣಿ  ರಾಜ್ಯದಲ್ಲಿ ಗೋಮಾಂಸ ತಿನ್ನುವವರಿಗೆ ಯಾವುದೇ ಸಹಾಯವನ್ನು ಮಾಡಬಾರದು  ಎಂದು ಹೇಳಿಕೆ ಕೊಟ್ಟು ಟೀಕೆಗೆ ಕಾರಣರಾಗಿದ್ದರು.

ಇದನ್ನು ಓದಿ; ಮುಜಾಫರ್‌ನಗರ ಪ್ರಕರಣ: ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳದ ಶಿಕ್ಷಣ ಸಚಿವ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...