Homeಮುಖಪುಟ'ಧರ್ಮ ಘೋಷಿಸಿ' | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

- Advertisement -
- Advertisement -

ಆಂಧ್ರಪ್ರದೇಶದ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಯೋಜಿಸಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ‘ಧರ್ಮ ಘೋಷಿಸಿ’ ಎಂದು ಆಂಧ್ರಪ್ರದೇಶ ಆಡಳಿತರೂಢ ಪಕ್ಷವು ಜಗನ್‌ ಮೋಹನ್‌ ರೆಡ್ಡಿ ಅವರೊಂದಿಗೆ ಕೇಳಿಕೊಂಡಿದ್ದರಿಂದ ತಿರುಪತಿ ದೇವಸ್ಥಾನದ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೆಡ್ಡಿ ಅವರ ಆಪ್ತ ಮೂಲಗಳು ಬೆಟ್ಟದ ದೇಗುಲಕ್ಕೆ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಅವರು ದೇವಾಲಯದ ಪಟ್ಟಣಕ್ಕೆ ಹೊರಡುವ ಕೆಲವೇ ಗಂಟೆಗಳ ಮೊದಲು ಬಂದ ನಿರ್ಧಾರದ ಹಿಂದಿನ ಕಾರಣವನ್ನು ತಕ್ಷಣವೇ ಬಹಿರಂಗಪಡಿಸಲಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಅದಾಗ್ಯೂ, ದೇವಸ್ಥಾನವನ್ನು ಪ್ರವೇಶಿಸುವ ಮೊದಲು ತಮ್ಮ ನಂಬಿಕೆಯನ್ನು ಘೋಷಿಸಬೇಕು ಎಂಬ ಪಿಡಿಪಿ ಬೇಡಿಕೆಯ ನಡುವೆ ಜಗನ್ ಅವರ ಭೇಟಿಯನ್ನು ರದ್ದುಗೊಳಿಸಲಾಯಿತು ಎಂದು ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗನ್ ಮೋಹನ್, ದೇಶದ ಪ್ರತಿಯೊಬ್ಬರಿಗೂ ನನ್ನ ಧರ್ಮ ತಿಳಿದಿದೆ. ನಾನು ಸಿಎಂ ಆಗುವ ಮೊದಲು ಹಲವಾರು ಬಾರಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ನಾಲ್ಕು ಗೋಡೆಗಳ ಮಧ್ಯೆ ಬೈಬಲ್ ಓದಿದರೂ ಇಸ್ಲಾಂ, ಹಿಂದೂ ಮತ್ತು ಸಿಖ್ ಧರ್ಮವನ್ನು ಗೌರವಿಸುತ್ತೇನೆ ಎಂದು ಹೇಳಿದರು.

ತಮ್ಮ ನಾಯಕರು ದೇವಸ್ಥಾನಕ್ಕೆ ಹೋಗದಂತೆ ತಿರುಪತಿಯಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟಿವಿಗಳು ತೋರಿಸುತ್ತಿವೆ ಎಂದು ಜಗನ್ ಹೇಳಿದ್ದಾರೆ. ಧರ್ಮ ಘೋಷಿಸಿ

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ತಮ್ಮ (ಚಂದ್ರಬಾಬು ನಾಯ್ಡು) 100 ದಿನಗಳ ಆಡಳಿತದ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಮತ್ತು ಗಮನವನ್ನು ಬೇರೆಡೆಗೆ ಸೆಳೆಯಲು ಚಂದ್ರಬಾಬು ನಾಯ್ಡು ಅವರು ಲಡ್ಡು ವಿಚಾರವನ್ನು ಮುಂದಿಟ್ಟರು. ಲಡ್ಡು ವಿಚಾರದಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಅವರು ಉದ್ದೇಶಪೂರ್ವಕವಾಗಿ ಧರ್ಮದ ಘೋಷಣೆ ಮಾಡುವಂತೆ ಕೇಳುತ್ತಿದ್ದಾರೆ. ಲಡ್ಡು ಗುಣಮಟ್ಟದ ಬಗ್ಗೆ ಅನುಮಾನದ ಬೀಜಗಳನ್ನು ಬಿತ್ತಿದೆ” ಎಂದು ರೆಡ್ಡಿ ಹೇಳಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ ಐದು ವರ್ಷಗಳ ಕಾಲ (ಅವರು ಸಿಎಂ ಆಗಿದ್ದಾಗ) ರೇಷ್ಮೆ ವಸ್ತ್ರವನ್ನು ಅರ್ಪಿಸುವ ಅವಕಾಶ ನನಗೆ ಸಿಕ್ಕಿತ್ತು. ನಾನು ಅದನ್ನು ಅರ್ಥಮಾಡಿಕೊಳ್ಳಬಲ್ಲೆ. ಇದು ನನ್ನ ಮೊದಲ ಬಾರಿಯ ಭೇಟಿ ಅಲ್ಲ ಎಂದು ಅವರು ಹೇಳಿದ್ದಾರೆ. ಗುಣಮಟ್ಟದ ಕಾರಣಕ್ಕಾಗಿ ಟಿಟಿಡಿ ತಿರಸ್ಕರಿಸಿದ ತುಪ್ಪವನ್ನು ಲಡ್ಡು ಪ್ರಸಾದ ತಯಾರಿಸಲು ಎಂದಿಗೂ ಬಳಸಲಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ತಿರುಪತಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ತುಪ್ಪದ ಬಳಕೆ ಮತ್ತು ಅದರಲ್ಲಿ ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚಂದ್ರಬಾಬು ನಾಯ್ಡು ಕಳೆದ ವಾರ ಆರೋಪಿಸಿದ್ದರು.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...