Homeಮುಖಪುಟ'ಧರ್ಮ ಘೋಷಿಸಿ' | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

- Advertisement -
- Advertisement -

ಆಂಧ್ರಪ್ರದೇಶದ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಯೋಜಿಸಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ‘ಧರ್ಮ ಘೋಷಿಸಿ’ ಎಂದು ಆಂಧ್ರಪ್ರದೇಶ ಆಡಳಿತರೂಢ ಪಕ್ಷವು ಜಗನ್‌ ಮೋಹನ್‌ ರೆಡ್ಡಿ ಅವರೊಂದಿಗೆ ಕೇಳಿಕೊಂಡಿದ್ದರಿಂದ ತಿರುಪತಿ ದೇವಸ್ಥಾನದ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೆಡ್ಡಿ ಅವರ ಆಪ್ತ ಮೂಲಗಳು ಬೆಟ್ಟದ ದೇಗುಲಕ್ಕೆ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಅವರು ದೇವಾಲಯದ ಪಟ್ಟಣಕ್ಕೆ ಹೊರಡುವ ಕೆಲವೇ ಗಂಟೆಗಳ ಮೊದಲು ಬಂದ ನಿರ್ಧಾರದ ಹಿಂದಿನ ಕಾರಣವನ್ನು ತಕ್ಷಣವೇ ಬಹಿರಂಗಪಡಿಸಲಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಅದಾಗ್ಯೂ, ದೇವಸ್ಥಾನವನ್ನು ಪ್ರವೇಶಿಸುವ ಮೊದಲು ತಮ್ಮ ನಂಬಿಕೆಯನ್ನು ಘೋಷಿಸಬೇಕು ಎಂಬ ಪಿಡಿಪಿ ಬೇಡಿಕೆಯ ನಡುವೆ ಜಗನ್ ಅವರ ಭೇಟಿಯನ್ನು ರದ್ದುಗೊಳಿಸಲಾಯಿತು ಎಂದು ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗನ್ ಮೋಹನ್, ದೇಶದ ಪ್ರತಿಯೊಬ್ಬರಿಗೂ ನನ್ನ ಧರ್ಮ ತಿಳಿದಿದೆ. ನಾನು ಸಿಎಂ ಆಗುವ ಮೊದಲು ಹಲವಾರು ಬಾರಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ನಾಲ್ಕು ಗೋಡೆಗಳ ಮಧ್ಯೆ ಬೈಬಲ್ ಓದಿದರೂ ಇಸ್ಲಾಂ, ಹಿಂದೂ ಮತ್ತು ಸಿಖ್ ಧರ್ಮವನ್ನು ಗೌರವಿಸುತ್ತೇನೆ ಎಂದು ಹೇಳಿದರು.

ತಮ್ಮ ನಾಯಕರು ದೇವಸ್ಥಾನಕ್ಕೆ ಹೋಗದಂತೆ ತಿರುಪತಿಯಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟಿವಿಗಳು ತೋರಿಸುತ್ತಿವೆ ಎಂದು ಜಗನ್ ಹೇಳಿದ್ದಾರೆ. ಧರ್ಮ ಘೋಷಿಸಿ

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ತಮ್ಮ (ಚಂದ್ರಬಾಬು ನಾಯ್ಡು) 100 ದಿನಗಳ ಆಡಳಿತದ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಮತ್ತು ಗಮನವನ್ನು ಬೇರೆಡೆಗೆ ಸೆಳೆಯಲು ಚಂದ್ರಬಾಬು ನಾಯ್ಡು ಅವರು ಲಡ್ಡು ವಿಚಾರವನ್ನು ಮುಂದಿಟ್ಟರು. ಲಡ್ಡು ವಿಚಾರದಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಅವರು ಉದ್ದೇಶಪೂರ್ವಕವಾಗಿ ಧರ್ಮದ ಘೋಷಣೆ ಮಾಡುವಂತೆ ಕೇಳುತ್ತಿದ್ದಾರೆ. ಲಡ್ಡು ಗುಣಮಟ್ಟದ ಬಗ್ಗೆ ಅನುಮಾನದ ಬೀಜಗಳನ್ನು ಬಿತ್ತಿದೆ” ಎಂದು ರೆಡ್ಡಿ ಹೇಳಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ ಐದು ವರ್ಷಗಳ ಕಾಲ (ಅವರು ಸಿಎಂ ಆಗಿದ್ದಾಗ) ರೇಷ್ಮೆ ವಸ್ತ್ರವನ್ನು ಅರ್ಪಿಸುವ ಅವಕಾಶ ನನಗೆ ಸಿಕ್ಕಿತ್ತು. ನಾನು ಅದನ್ನು ಅರ್ಥಮಾಡಿಕೊಳ್ಳಬಲ್ಲೆ. ಇದು ನನ್ನ ಮೊದಲ ಬಾರಿಯ ಭೇಟಿ ಅಲ್ಲ ಎಂದು ಅವರು ಹೇಳಿದ್ದಾರೆ. ಗುಣಮಟ್ಟದ ಕಾರಣಕ್ಕಾಗಿ ಟಿಟಿಡಿ ತಿರಸ್ಕರಿಸಿದ ತುಪ್ಪವನ್ನು ಲಡ್ಡು ಪ್ರಸಾದ ತಯಾರಿಸಲು ಎಂದಿಗೂ ಬಳಸಲಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ತಿರುಪತಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ತುಪ್ಪದ ಬಳಕೆ ಮತ್ತು ಅದರಲ್ಲಿ ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚಂದ್ರಬಾಬು ನಾಯ್ಡು ಕಳೆದ ವಾರ ಆರೋಪಿಸಿದ್ದರು.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...