Homeಮುಖಪುಟ'ಧರ್ಮ ಘೋಷಿಸಿ' | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

- Advertisement -
- Advertisement -

ಆಂಧ್ರಪ್ರದೇಶದ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಯೋಜಿಸಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ‘ಧರ್ಮ ಘೋಷಿಸಿ’ ಎಂದು ಆಂಧ್ರಪ್ರದೇಶ ಆಡಳಿತರೂಢ ಪಕ್ಷವು ಜಗನ್‌ ಮೋಹನ್‌ ರೆಡ್ಡಿ ಅವರೊಂದಿಗೆ ಕೇಳಿಕೊಂಡಿದ್ದರಿಂದ ತಿರುಪತಿ ದೇವಸ್ಥಾನದ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೆಡ್ಡಿ ಅವರ ಆಪ್ತ ಮೂಲಗಳು ಬೆಟ್ಟದ ದೇಗುಲಕ್ಕೆ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಅವರು ದೇವಾಲಯದ ಪಟ್ಟಣಕ್ಕೆ ಹೊರಡುವ ಕೆಲವೇ ಗಂಟೆಗಳ ಮೊದಲು ಬಂದ ನಿರ್ಧಾರದ ಹಿಂದಿನ ಕಾರಣವನ್ನು ತಕ್ಷಣವೇ ಬಹಿರಂಗಪಡಿಸಲಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಅದಾಗ್ಯೂ, ದೇವಸ್ಥಾನವನ್ನು ಪ್ರವೇಶಿಸುವ ಮೊದಲು ತಮ್ಮ ನಂಬಿಕೆಯನ್ನು ಘೋಷಿಸಬೇಕು ಎಂಬ ಪಿಡಿಪಿ ಬೇಡಿಕೆಯ ನಡುವೆ ಜಗನ್ ಅವರ ಭೇಟಿಯನ್ನು ರದ್ದುಗೊಳಿಸಲಾಯಿತು ಎಂದು ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗನ್ ಮೋಹನ್, ದೇಶದ ಪ್ರತಿಯೊಬ್ಬರಿಗೂ ನನ್ನ ಧರ್ಮ ತಿಳಿದಿದೆ. ನಾನು ಸಿಎಂ ಆಗುವ ಮೊದಲು ಹಲವಾರು ಬಾರಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ನಾಲ್ಕು ಗೋಡೆಗಳ ಮಧ್ಯೆ ಬೈಬಲ್ ಓದಿದರೂ ಇಸ್ಲಾಂ, ಹಿಂದೂ ಮತ್ತು ಸಿಖ್ ಧರ್ಮವನ್ನು ಗೌರವಿಸುತ್ತೇನೆ ಎಂದು ಹೇಳಿದರು.

ತಮ್ಮ ನಾಯಕರು ದೇವಸ್ಥಾನಕ್ಕೆ ಹೋಗದಂತೆ ತಿರುಪತಿಯಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟಿವಿಗಳು ತೋರಿಸುತ್ತಿವೆ ಎಂದು ಜಗನ್ ಹೇಳಿದ್ದಾರೆ. ಧರ್ಮ ಘೋಷಿಸಿ

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ತಮ್ಮ (ಚಂದ್ರಬಾಬು ನಾಯ್ಡು) 100 ದಿನಗಳ ಆಡಳಿತದ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಮತ್ತು ಗಮನವನ್ನು ಬೇರೆಡೆಗೆ ಸೆಳೆಯಲು ಚಂದ್ರಬಾಬು ನಾಯ್ಡು ಅವರು ಲಡ್ಡು ವಿಚಾರವನ್ನು ಮುಂದಿಟ್ಟರು. ಲಡ್ಡು ವಿಚಾರದಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಅವರು ಉದ್ದೇಶಪೂರ್ವಕವಾಗಿ ಧರ್ಮದ ಘೋಷಣೆ ಮಾಡುವಂತೆ ಕೇಳುತ್ತಿದ್ದಾರೆ. ಲಡ್ಡು ಗುಣಮಟ್ಟದ ಬಗ್ಗೆ ಅನುಮಾನದ ಬೀಜಗಳನ್ನು ಬಿತ್ತಿದೆ” ಎಂದು ರೆಡ್ಡಿ ಹೇಳಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ ಐದು ವರ್ಷಗಳ ಕಾಲ (ಅವರು ಸಿಎಂ ಆಗಿದ್ದಾಗ) ರೇಷ್ಮೆ ವಸ್ತ್ರವನ್ನು ಅರ್ಪಿಸುವ ಅವಕಾಶ ನನಗೆ ಸಿಕ್ಕಿತ್ತು. ನಾನು ಅದನ್ನು ಅರ್ಥಮಾಡಿಕೊಳ್ಳಬಲ್ಲೆ. ಇದು ನನ್ನ ಮೊದಲ ಬಾರಿಯ ಭೇಟಿ ಅಲ್ಲ ಎಂದು ಅವರು ಹೇಳಿದ್ದಾರೆ. ಗುಣಮಟ್ಟದ ಕಾರಣಕ್ಕಾಗಿ ಟಿಟಿಡಿ ತಿರಸ್ಕರಿಸಿದ ತುಪ್ಪವನ್ನು ಲಡ್ಡು ಪ್ರಸಾದ ತಯಾರಿಸಲು ಎಂದಿಗೂ ಬಳಸಲಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ತಿರುಪತಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ತುಪ್ಪದ ಬಳಕೆ ಮತ್ತು ಅದರಲ್ಲಿ ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚಂದ್ರಬಾಬು ನಾಯ್ಡು ಕಳೆದ ವಾರ ಆರೋಪಿಸಿದ್ದರು.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...