Homeಮುಖಪುಟದಲಿತ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ ಘೋಷಿಸಿ: ಕೇಜ್ರಿವಾಲ್ ಗೆ ಪತ್ರ ಬರೆದ ಎಎಪಿ ಸಂಸದೆ...

ದಲಿತ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ ಘೋಷಿಸಿ: ಕೇಜ್ರಿವಾಲ್ ಗೆ ಪತ್ರ ಬರೆದ ಎಎಪಿ ಸಂಸದೆ ಸ್ವಾತಿ ಮಲಿವಾಲ್ 

- Advertisement -
- Advertisement -

ದೆಹಲಿ ವಿಧಾನಸಭೆಯಲ್ಲಿ ದಲಿತ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ (ಎಲ್‌ಒಪಿ) ಘೋಷಿಸುವಂತೆ ಒತ್ತಾಯಿಸಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಬುಧವಾರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದಾರೆ.

2022ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಂಜಾಬ್‌ನಲ್ಲಿ ದಲಿತ ಉಪಮುಖ್ಯಮಂತ್ರಿ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದರು. ಆದರೆ ನಂತರ ತಮ್ಮ ಭರವಸೆಯಿಂದ ಹಿಂದೆ ಸರಿದರು ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ. ಮಲಿವಾಲ್ ಅವರು ದಲಿತ ಎಲ್‌ಒಪಿ ಮಾಡಿ “ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ” ಸಲ್ಲಿಸುವಂತೆ ಒತ್ತಾಯಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ದೊಡ್ಡ ಹಿನ್ನಡೆಯಾಯಿತು, ಇದರಲ್ಲಿ ಜನರ ತೀರ್ಪು ಆಡಳಿತ ಪಕ್ಷದ ವಿರುದ್ಧ ಹೋಗಿ, ಅವರನ್ನು ಅಧಿಕಾರದಿಂದ ಹೊರಹಾಕಿತು. ಎಎಪಿ ಕೇವಲ 22 ಸ್ಥಾನಗಳನ್ನು ಗಳಿಸಿತು. 40 ಸ್ಥಾನಗಳ ಕುಸಿತ ಕಂಡಿತು. ಆದರೆ ಬಿಜೆಪಿ 70 ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಿತು, 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿತು.

2022ರ ಪಂಜಾಬ್ ಚುನಾವಣೆಯ ಸಮಯದಲ್ಲಿ ಗೆದ್ದ ನಂತರ ನಾವು ದಲಿತ ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ನೀವು ಭರವಸೆ ನೀಡಿದ್ದೀರಿ, 3 ವರ್ಷಗಳ ನಂತರವೂ ಈ ಭರವಸೆಯನ್ನು ಈಡೇರಿಸದಿರುವುದು ತುಂಬಾ ದುಃಖಕರವಾಗಿದೆ. ಈಗ ದೆಹಲಿಯಲ್ಲಿ ವಿರೋಧ ಪಕ್ಷದ ನಾಯಕನನ್ನು ನೇಮಿಸುವ ಸಮಯ ಬಂದಾಗ, ದೆಹಲಿಯಿಂದ ಪಕ್ಷದ ದಲಿತ ಸಮುದಾಯದ ಶಾಸಕರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದು ಮಲಿವಾಲ್ ಅವರು ಕೇಜ್ರಿವಾಲ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಬಾರಿ ಅವರು ದೆಹಲಿಯ ದಲಿತ ಶಾಸಕರನ್ನು ಎಲ್‌ಒಪಿ ಮಾಡುವ ಮೂಲಕ ಗೌರವಾನ್ವಿತ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, 27 ವರ್ಷಗಳ ನಂತರ ದೆಹಲಿಗೆ ಮರಳಿರುವ ಬಿಜೆಪಿಯು ದೆಹಲಿಯ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಸಚಿವರನ್ನು ಅಂತಿಮಗೊಳಿಸಲು ಇಂದು ತನ್ನ ಉನ್ನತ ನಾಯಕತ್ವದೊಂದಿಗೆ ಶಾಸಕಾಂಗ ಸಭೆ ನಡೆಸಲಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆಬ್ರವರಿ 20ರಂದು ಸಂಜೆ 4:30ಕ್ಕೆ ರಾಮ್ ಲೀಲಾ ಮೈದಾನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಎನ್‌ಡಿಎ ನಾಯಕರು, ಕೇಂದ್ರ ಸಚಿವರು ಮತ್ತು ಇತರ ಪ್ರಮುಖ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಎಎನ್‌ಐಗೆ ತಿಳಿಸಿವೆ.

ಸಮಾರಂಭಕ್ಕೂ ಮುನ್ನ ಸಂಗೀತ ಮತ್ತು ಹಾಡುಗಳನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸುಮಾರು 30,000 ಅತಿಥಿಗಳನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಪ್ರಮಾಣ ವಚನ ಸಮಾರಂಭದಲ್ಲಿ ಆರ್‌ಎಸ್‌ಎಸ್ ಮುಖಂಡರು ಮತ್ತು ಆಧ್ಯಾತ್ಮಿಕ ಧರ್ಮ ಗುರುಗಳು ಸಹ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕೈಗಾರಿಕೋದ್ಯಮಿಗಳು, ಸೆಲೆಬ್ರಿಟಿಗಳು, ದೆಹಲಿ ವಿಧಾನಸಭಾ ಚುನಾವಣೆಗೆ ನಿಯೋಜಿಸಲಾಗಿದ್ದ ಇತರ ರಾಜ್ಯಗಳ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಸಹ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಪ್ರಮಾಣ ವಚನ ಸಮಾರಂಭಕ್ಕೆ ಲಾಡ್ಲಿ ಬಹನಾಗಳು, ದೆಹಲಿ ರೈತರು ಮತ್ತು ಸುಮಾರು 30,000 ಅತಿಥಿಗಳನ್ನು ಆಹ್ವಾನಿಸಲಾಗಿದೆ.

ಮಹಾಕುಂಭಮೇಳದ ಕಾಲ್ತುಳಿತದಲ್ಲಿ ಸಾವಿರಾರು ಜನ ಸಾವು ಮತ್ತು ಶವಗಳನ್ನು ನದಿಗೆ ಎಸೆದಿದ್ದೀರಿ: ಮಮತಾ ಹೇಳಿಕೆ ಬೆಂಬಲಿಸಿದ ಅಖಿಲೇಶ್  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...