Homeಅಂತರಾಷ್ಟ್ರೀಯಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು 'ಭಯೋತ್ಪಾದಕರು' ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

- Advertisement -
- Advertisement -

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗುಂಪನ್ನು ಭಯೋತ್ಪಾದಕ ಸಂಘಟನೆ ಎಂದು ಹೆಸರಿಸುವಂತೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಮುಖ್ಯಮಂತ್ರಿ ಡೇವಿಡ್ ಎ.ಬಿ. ಮಂಗಳವಾರ ತಮ್ಮ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಉತ್ತರ ಅಮೆರಿಕಾದ ಹಲವಾರು ಪ್ರಾಂತ್ಯಗಳಲ್ಲಿ ಈ ಗುಂಪಿಗೆ ಸಂಬಂಧಿಸಿದ ಸುಲಿಗೆ ಪ್ರಕರಣಗಳನ್ನು ನಿಭಾಯಿಸುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ವರದಿಯಾಗಿದೆ. ದಕ್ಷಿಣ ಏಷ್ಯಾದ ವ್ಯಾಪಾರಿಗಳು ಎದುರಿಸುತ್ತಿರುವ ಅಪರಾಧಗಳನ್ನು ಪರಿಹರಿಸಲು ಸರ್ರೆಯಲ್ಲಿ ವಾರಾಂತ್ಯದಲ್ಲಿ ಸಾರ್ವಜನಿಕ ಸುರಕ್ಷತಾ ವೇದಿಕೆ ನಡೆದ ನಂತರ ಈ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಡೇವಿಗ್‌ ಒತ್ತಾಯಿಸಿದ್ದಾರೆ.

ದಕ್ಷಿಣ ಏಷ್ಯಾದ ಈ ವ್ಯಾಪಾರಿ ಸಮುದಾಯಕ್ಕೆ ಕೊಲೆ ಅಥವಾ ಹಿಂಸಾಚಾರದ ಬೆದರಿಕೆ ಹಾಕಿದ ನಂತರ ಸುಲಿಗೆ ಮಾಡಲಾಗುತ್ತಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ. ಬಿಷ್ಣೋಯ್ ಗ್ಯಾಂಗ್ ಅಂತಹ ಪ್ರಕರಣಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

ಪಂಜಾಬ್‌ನ ಗ್ಯಾಂಗ್‌ಸ್ಟರ್ ಬಿಷ್ಣೋಯ್ ಪ್ರಸ್ತುತ ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಕೇಂದ್ರ ಜೈಲಿನಲ್ಲಿದ್ದಾರೆ. ಅನೇಕ ಅಪರಾಧಗಳಿಗೆ ಸಂಬಂಧಿಸಿ ಅವರನ್ನು ಬಂಧನದಲ್ಲಿ ಇರಿಸಲಾಗಿದೆ. ಭಾರತ ಸರ್ಕಾರದ ಏಜೆಂಟರು ಉತ್ತರ ಅಮೆರಿಕಾದಲ್ಲಿ ಹಿಂಸಾಚಾರವನ್ನು ಯೋಜಿಸಲು ಮತ್ತು ಕಾರ್ಯಗತಗೊಳಿಸಲು ಬಿಷ್ಣೋಯಿ ಗ್ಯಾಂಗ್‌ನೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ಕೆನಡಾ ಸರ್ಕಾರ ಈ ಹಿಂದೆ ಆರೋಪ ಮಾಡಿವೆ.

“ಭಾರತದಲ್ಲಿ ಗ್ಯಾಂಗ್‌ಗಳು ನಮ್ಮ ಪ್ರಾಂತ್ಯದಲ್ಲಿ ಮತ್ತು ಇತರ ಪ್ರಾಂತ್ಯಗಳಲ್ಲಿ ವ್ಯವಹಾರ ಮಾಲೀಕರನ್ನು ಬೆದರಿಸಲು ಮತ್ತು ಸುಲಿಗೆ ಮಾಡಲು ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪಗಳಿವೆ” ಎಂದು ಮುಖ್ಯಮಂತ್ರಿ ಡೇವಿಡ್ ಎಬಿ ಮಂಗಳವಾರ ವಿಕ್ಟೋರಿಯಾದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

“ಈ ಕೆಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಸ್ವಯಂ ಗುರುತಿಸಲ್ಪಟ್ಟ ಗ್ಯಾಂಗ್‌ಗಳಲ್ಲಿ ಒಂದಾದ ಲಾರೆನ್ಸ್ ಬಿಷ್ಣೋಯ್ ಗುಂಪನ್ನು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡುವಂತೆ ಕೇಳಲು” ಪ್ರಧಾನಿ ಮಾರ್ಕ್ ಕಾರ್ನಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಗ್ಯಾಂಗ್‌ನ ಆಪಾದಿತ ಕಾರ್ಯಾಚರಣೆಗಳು ಬ್ರಿಟಿಷ್ ಕೊಲಂಬಿಯಾ, ಆಲ್ಬರ್ಟಾ ಮತ್ತು ಒಂಟಾರಿಯೊದಾದ್ಯಂತ ವಿಸ್ತರಿಸಿದೆ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಪಾತ್ರವಿದೆ ಎಂದು ಮುಂಬೈ ಪೊಲೀಸರು ಶಂಕಿಸಿದ್ದಾರೆ. ಮೇ 29, 2022 ರಂದು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಬಿಷ್ಣೋಯ್ ವಿರುದ್ಧ ಆರೋಪ ಹೊರಿಸಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...