Homeಅಂತರಾಷ್ಟ್ರೀಯಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು 'ಭಯೋತ್ಪಾದಕರು' ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

- Advertisement -
- Advertisement -

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗುಂಪನ್ನು ಭಯೋತ್ಪಾದಕ ಸಂಘಟನೆ ಎಂದು ಹೆಸರಿಸುವಂತೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಮುಖ್ಯಮಂತ್ರಿ ಡೇವಿಡ್ ಎ.ಬಿ. ಮಂಗಳವಾರ ತಮ್ಮ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಉತ್ತರ ಅಮೆರಿಕಾದ ಹಲವಾರು ಪ್ರಾಂತ್ಯಗಳಲ್ಲಿ ಈ ಗುಂಪಿಗೆ ಸಂಬಂಧಿಸಿದ ಸುಲಿಗೆ ಪ್ರಕರಣಗಳನ್ನು ನಿಭಾಯಿಸುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ವರದಿಯಾಗಿದೆ. ದಕ್ಷಿಣ ಏಷ್ಯಾದ ವ್ಯಾಪಾರಿಗಳು ಎದುರಿಸುತ್ತಿರುವ ಅಪರಾಧಗಳನ್ನು ಪರಿಹರಿಸಲು ಸರ್ರೆಯಲ್ಲಿ ವಾರಾಂತ್ಯದಲ್ಲಿ ಸಾರ್ವಜನಿಕ ಸುರಕ್ಷತಾ ವೇದಿಕೆ ನಡೆದ ನಂತರ ಈ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಡೇವಿಗ್‌ ಒತ್ತಾಯಿಸಿದ್ದಾರೆ.

ದಕ್ಷಿಣ ಏಷ್ಯಾದ ಈ ವ್ಯಾಪಾರಿ ಸಮುದಾಯಕ್ಕೆ ಕೊಲೆ ಅಥವಾ ಹಿಂಸಾಚಾರದ ಬೆದರಿಕೆ ಹಾಕಿದ ನಂತರ ಸುಲಿಗೆ ಮಾಡಲಾಗುತ್ತಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ. ಬಿಷ್ಣೋಯ್ ಗ್ಯಾಂಗ್ ಅಂತಹ ಪ್ರಕರಣಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

ಪಂಜಾಬ್‌ನ ಗ್ಯಾಂಗ್‌ಸ್ಟರ್ ಬಿಷ್ಣೋಯ್ ಪ್ರಸ್ತುತ ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಕೇಂದ್ರ ಜೈಲಿನಲ್ಲಿದ್ದಾರೆ. ಅನೇಕ ಅಪರಾಧಗಳಿಗೆ ಸಂಬಂಧಿಸಿ ಅವರನ್ನು ಬಂಧನದಲ್ಲಿ ಇರಿಸಲಾಗಿದೆ. ಭಾರತ ಸರ್ಕಾರದ ಏಜೆಂಟರು ಉತ್ತರ ಅಮೆರಿಕಾದಲ್ಲಿ ಹಿಂಸಾಚಾರವನ್ನು ಯೋಜಿಸಲು ಮತ್ತು ಕಾರ್ಯಗತಗೊಳಿಸಲು ಬಿಷ್ಣೋಯಿ ಗ್ಯಾಂಗ್‌ನೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ಕೆನಡಾ ಸರ್ಕಾರ ಈ ಹಿಂದೆ ಆರೋಪ ಮಾಡಿವೆ.

“ಭಾರತದಲ್ಲಿ ಗ್ಯಾಂಗ್‌ಗಳು ನಮ್ಮ ಪ್ರಾಂತ್ಯದಲ್ಲಿ ಮತ್ತು ಇತರ ಪ್ರಾಂತ್ಯಗಳಲ್ಲಿ ವ್ಯವಹಾರ ಮಾಲೀಕರನ್ನು ಬೆದರಿಸಲು ಮತ್ತು ಸುಲಿಗೆ ಮಾಡಲು ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪಗಳಿವೆ” ಎಂದು ಮುಖ್ಯಮಂತ್ರಿ ಡೇವಿಡ್ ಎಬಿ ಮಂಗಳವಾರ ವಿಕ್ಟೋರಿಯಾದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

“ಈ ಕೆಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಸ್ವಯಂ ಗುರುತಿಸಲ್ಪಟ್ಟ ಗ್ಯಾಂಗ್‌ಗಳಲ್ಲಿ ಒಂದಾದ ಲಾರೆನ್ಸ್ ಬಿಷ್ಣೋಯ್ ಗುಂಪನ್ನು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡುವಂತೆ ಕೇಳಲು” ಪ್ರಧಾನಿ ಮಾರ್ಕ್ ಕಾರ್ನಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಗ್ಯಾಂಗ್‌ನ ಆಪಾದಿತ ಕಾರ್ಯಾಚರಣೆಗಳು ಬ್ರಿಟಿಷ್ ಕೊಲಂಬಿಯಾ, ಆಲ್ಬರ್ಟಾ ಮತ್ತು ಒಂಟಾರಿಯೊದಾದ್ಯಂತ ವಿಸ್ತರಿಸಿದೆ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಪಾತ್ರವಿದೆ ಎಂದು ಮುಂಬೈ ಪೊಲೀಸರು ಶಂಕಿಸಿದ್ದಾರೆ. ಮೇ 29, 2022 ರಂದು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಬಿಷ್ಣೋಯ್ ವಿರುದ್ಧ ಆರೋಪ ಹೊರಿಸಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...