Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...