Homeಮುಖಪುಟಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

ಹಿಂದೂ, ಮುಸ್ಲಿಂ ಸಮುದಾಯಗಳಲ್ಲಿ ಇಳಿದ ‘ಫಲವತ್ತತೆ’ ದರ: ಅಧ್ಯಯನ

- Advertisement -
- Advertisement -

ಹಿಂದೂ ಮತ್ತು ಮುಸ್ಲಿಂ ಸಮುದಾಯಗಳೆರಡರಲ್ಲೂ ಸಮಾನಾಂತರವಾಗಿ ಫಲವತ್ತೆ (ಗರ್ಭದಾರಣೆ) ಪ್ರಮಾಣ ಇಳಿಮುಖವಾಗಿದೆ ಎಂದು ಅಧ್ಯಯನವೊಂದು ಹೇಳಿದೆ.

ವಾಷಿಂಗ್‌‌ಟನ್ ಮೂಲದ ಲಾಭದ ಉದ್ದೇಶವಿಲ್ಲದ ಪ್ಯೂ ಸಂಶೋಧನಾ ಸಂಸ್ಥೆ ತನ್ನ ಅಧ್ಯಯನವನ್ನು ಪ್ರಕಟಿಸಿದ್ದು, ಭಾರತದ ಜನಗಣತಿ ಮತ್ತು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಮಾಹಿತಿಯ ಆಧಾರದ ಮೇಲೆ ಅಧ್ಯಯನ ಮಾಡಲಾಗಿದೆ. ಜನಸಂಖ್ಯೆಯ ಧಾರ್ಮಿಕ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಉಂಟುಮಾಡುವ ‘ಫಲವತ್ತೆಯ ದರ, ವಲಸೆ ಮತ್ತು ಪರಿವರ್ತನೆಗಳು’- ಈ ಮೂರು ಪ್ರಮುಖ ಅಂಶಗಳ ಕುರಿತು ಅಧ್ಯಯನ ಮಾಡಲಾಗಿದೆ.

ಫಲವತ್ತತೆ ಪ್ರಮಾಣ ಮುಸ್ಲಿಂ ಸಮುದಾಯಗಳಲ್ಲಿ ಹೆಚ್ಚಿತ್ತು. ಆದರೆ,  ಮುಸ್ಲಿ ಸಮುದಾಯದಲ್ಲಿಯೂ ಫಲವತ್ತತೆ ದರದಲ್ಲಿ ತೀವ್ರ ಕುಸಿತ ಕಾಣಬಹುದು ಎಂದು ವರದಿ ಹೇಳಿದೆ. 1992ರಿಂದ 2015 ಅವಧಿಯಲ್ಲಿ 4.4 ದರದಿಂದ 2.6 ದರಕ್ಕೆ ಮುಸ್ಲಿಂ ಸಮುದಾಯದಲ್ಲಿ ಫಲವತ್ತತೆ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಹಿಂದೂ ಸಮುದಾಯದಲ್ಲಿ 3.3ರಿಂದ 2.1ಕ್ಕೆ ಫಲವತ್ತತೆ ಕುಸಿತ ಕಂಡಿದೆ. ಭಾರತದ ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಅಂತರವು ಹಿಂದೆಂದಿಗಿಂತ ಕಡಿಮೆಯಾಗಿದೆ ಎಂದು ಅಧ್ಯಯನ ಹೇಳಿದೆ.

ಭಾರತದ ಸರಾಸರಿ ಫಲವತ್ತತೆ ದರ 2.2 ಇದ್ದು, ಆರ್ಥಿಕವಾಗಿ ಮುಂದುವರಿದ ಅಮೆರಿಕದಂತಹ (1.6) ದೇಶಗಳಿಗೆ ಹೋಲಿಸಿದರೆ ಹೆಚ್ಚಿದೆ. ಆದರೆ 1992 (3.4 ದರ) ಅಥವಾ 1951ನೇ (5.9 ದರ) ಇಸವಿಗೆ ಹೋಲಿಸಿದರೆ ಭಾರತದಲ್ಲಿ ಫಲವತ್ತತೆ ದರ ಕಡಿಮೆಯಾಗಿದೆ.

ಈ ಎರಡು ಧಾರ್ಮಿಕ ಗುಂಪುಗಳ ನಡುವಿನ ಹೆರಿಗೆಯ ಪ್ರಮಾಣದಲ್ಲೂ ಕಡಿಮೆಯಾಗಿದೆ. 1951 ಮತ್ತು 1961ರ ನಡುವೆ, ಮುಸ್ಲಿಂ ಜನಸಂಖ್ಯೆಯು ಶೇ. 32.7 ಇತ್ತು. ಶೇ. 21.6ರಷ್ಟಿದ್ದ ಜನಸಂಖ್ಯೆ ಶೇ.11ರಷ್ಟು ಹೆಚ್ಚಾಗಿತ್ತು. ಆದರೆ ಈ ಅಂತರ ಕಡಿಮೆಯಾಗಿದೆ. 2001ರಿಂದ 2011ರವರೆಗೆ, ಮುಸ್ಲಿಮರು (24.7%) ಇದ್ದಾರೆ.

1951 ಮತ್ತು 2011ರ ನಡುವೆ, ಮುಸ್ಲಿಮರು ಶೇ. 4.4ರಿಂದ ಶೇ.14.2 ಜನಸಂಖ್ಯೆಗೆ ಏರಿದರೆ, ಹಿಂದೂಗಳು ಶೇ. 4.3ರಷ್ಟು ಇಳಿದು 79.8ರಷ್ಟಾಗಿದ್ದರು. ಆದರೆ ಪ್ರಮುಖ ಧಾರ್ಮಿಕ ಗುಂಪುಗಳು (ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರು) ಹೆಚ್ಚಿವೆ. ಇದಕ್ಕೆ ಏಕೈಕ ಅಪವಾದವೆಂದರೆ ಪಾರ್ಸಿಗಳು ಇದ್ದಾರೆ. ಅವರ ಸಂಖ್ಯೆ 1951 ಮತ್ತು 2011ರ ನಡುವೆ 1,10,000 ರಿಂದ 60,000ಕ್ಕೆ ಇಳಿದಿದೆ.

ಕುತೂಹಲಕಾರಿಯಾಗಿ, ಭಾರತದ ಒಟ್ಟು ಜನಸಂಖ್ಯೆ 120 ಕೋಟಿಯಲ್ಲಿ 80 ಲಕ್ಷ ಜನರು ಆರು ಪ್ರಮುಖ ಧಾರ್ಮಿಕ ಗುಂಪುಗಳಲ್ಲಿ ಯಾವುದಕ್ಕೂ ಸೇರಿಲ್ಲ. ಈ ವರ್ಗ ಹೆಚ್ಚಾಗಿ ಆದಿವಾಸಿ ಜನರನ್ನು ಒಳಗೊಂಡಿದ್ದು, ದೊಡ್ಡ ಗುಂಪು ಸರ್ನಸ್ (ಸುಮಾರು 50 ಲಕ್ಷ), ಗೊಂಡ್ (10 ಲಕ್ಷ) ಮತ್ತು ಸಾರಿ ಧರ್ಮ (5,10,000) ಇರುವುದನ್ನು ಕಾಣಬಹುದು.

ಗಂಡು ಮಕ್ಕಳ ಮೇಲಿನ ವ್ಯಾಮೋಹದ ಮೇಲೆ ಗರ್ಭಪಾತ ಮಾಡಿರುವುದನ್ನು ಗಮನಿಸಲು 1970ರಿಂದ 2017ರ ನಡುವಿನ ಅಂಕಿ-ಅಂಶಗಳನ್ನು ಪರಿಶೀಲಿಸಲಾಗಿದೆ. “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಹೋಲಿಸಿದರೆ ಹಿಂದೂಗಳಲ್ಲೇ ಹೆಚ್ಚು ಗರ್ಭಪಾತ ಮಾಡಲಾಗಿದೆ” ಎಂದು ವರದಿ ಹೇಳಿದೆ.

ಫಲವತ್ತತೆ ವಿಚಾರದಲ್ಲಿ ಧರ್ಮದ ಪಾತ್ರವಿಲ್ಲ ಎಂದು ಎಚ್ಚರಿಸಿರುವ ಅಧ್ಯಯನವು ಮಧ್ಯ ಭಾರತದಲ್ಲಿ ಮಹಿಳೆಯರು ಹೆಚ್ಚು ಮಕ್ಕಳನ್ನು ಹೊಂದಿದ್ದರು, ಬಿಹಾರ ಮತ್ತು ಉತ್ತರ ಪ್ರದೇಶ ಕ್ರಮವಾಗಿ 3.4 ಮತ್ತು 2.7ರ ಒಟ್ಟು ಫಲವತ್ತತೆ ದರವನ್ನು ಹೊಂದಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ 1.7 ಮತ್ತು 1.6ರ ಫಲವತ್ತತೆ ಇದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...